HomeGadag Newsಗ್ಯಾರಂಟಿ ಯೋಜನೆಗಳ ನೋಂದಣಿ ಕಾರ್ಯದಲ್ಲಿ ಗದಗ ಜಿಲ್ಲೆ ಮುಂಜೂಣಿಯಲ್ಲಿದೆ; ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ್

ಗ್ಯಾರಂಟಿ ಯೋಜನೆಗಳ ನೋಂದಣಿ ಕಾರ್ಯದಲ್ಲಿ ಗದಗ ಜಿಲ್ಲೆ ಮುಂಜೂಣಿಯಲ್ಲಿದೆ; ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ್

For Dai;y Updates Join Our whatsapp Group

Spread the love

ಜಿಲ್ಲಾಡಳಿತ ಕಾರ್ಯವೈಖರಿಗೆ ಉಸ್ತುವಾರಿ ಸಚಿವರ ಶ್ಲಾಘನೆ…..

ವಿಜಯಸಾಕ್ಷಿ ಸುದ್ದಿ, ಗದಗ

ಬಡವರ ಕಲ್ಯಾಣಕ್ಕಾಗಿ ಘೋಷಿಸಲಾದ ಸರಕಾರದ ಪ್ರಮುಖ ಐದು ಗ್ಯಾರಂಟಿಗಳ ನೋಂದಣಿ ಕಾರ್ಯದಲ್ಲಿ ಗದಗ ಜಿಲ್ಲೆ ಮುಂಜೂಣಿಯಲ್ಲಿದ್ದು, ಇನ್ನೂ ಹತ್ತು ದಿನಗಳಲ್ಲಿ ನೋಂದಣಿ ಕಾರ್ಯ ಪೂರ್ಣಗೊಳ್ಳಲಿದೆ. ಜಿಲ್ಲಾಡಳಿತ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ರಾಜ್ಯ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ನಗರದ‌ ಪ್ರವಾಸಿ‌ ಮಂದಿರದಲ್ಲಿ ಭಾನುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳು ಸಮಾಜದ ನಿರ್ಗತಿಕರ, ಕೆಳವರ್ಗದ ಕಲ್ಯಾಣ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದರು.

ಸರಕಾರದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹ ಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಿಗೆ ಗದಗ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂದರು.

ಶಕ್ತಿ ಯೋಜನೆ: ಶಕ್ತಿ ಯೋಜನೆಯು ಮಹಿಳೆಯರ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಯೋಜನೆಯಾಗಿದ್ದು, ಜಿಲ್ಲೆಯಲ್ಲಿ ಈ ಮೊದಲು 1.75 ಲಕ್ಷ ಪ್ರಯಾಣಿಕರು ದಿನಂಪ್ರತಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿಯಾದಾಗಿನಿಂದ ದಿನಂಪ್ರತಿ ಸಂಚರಿಸುವವರ ಸಂಖ್ಯೆ 2.46 ಲಕ್ಷಕ್ಕೆ ಎರಿಕೆಯಾಗಿದೆ. ಲೋಡ್ ಫ್ಯಾಕ್ಟರ್ 76% ರಿಂದ 96% ಕ್ಕೆ ಏರಿಕೆಯಾಗಿದೆ. ಪ್ರತಿದಿನ 60 ಲಕ್ಷ ರೂ ಗಳಿಂದ 70 ಲಕ್ಷ ರೂ. ಸಂಗ್ರಹವಾಗುತ್ತಿದೆ. ಈ ಯೋಜನೆಯಿಂದ ಒಟ್ಟಾರೆ 2 ಕೋಟಿ ರೂ. ಆದಾಯ ಹೆಚ್ಚಳವಾಗಿದೆ ಎಂದರು.

ಗೃಹಜ್ಯೋತಿ: ಪ್ರತಿ ಮನೆಯ 200 ಯುನಿಟಗಳ ವರೆಗಿನ ಉಚಿತ ವಿಧ್ಯುತ ಒದಗಿಸುವ ಯೋಜನೆ ಇದಾಗಿದ್ದು, ಜೂನ್ 18 ರಿಂದ ನೊಂದಣಿ ಕಾರ್ಯ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 3,15,756 ಸಂಪರ್ಕಗಳಿದ್ದು ಈ ಪೈಕಿ 25,805 ಸಂಪರ್ಕಗಳು ಡಿಫಾಲ್ಟ ಹಾಗೂ ಕಡಿತಗೊಂಡಿವೆ, 696 ಸಂಪರ್ಕಗಳು ಅನರ್ಹವಾಗಿದ್ದು, 2,89,207 ಸಂಪರ್ಕಗಳು ಗೃಹ ಜ್ಯೋತಿ ಯೋಜನೆಯ ವ್ಯಾಪ್ತಿಗೊಳಪಡುತ್ತವೆ. ಶನಿವಾರ ಸಂಜೆಯವರೆಗೆ 1,62,954 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದು, 1,26,080 ಗ್ರಾಹಕರು ನೋಂದಣಿ ಮಾಡಿಕೊಳ್ಳಬೇಕಿದೆ. ಈಗಾಗಲೇ ಶೇ. 56.30 ರಷ್ಟು ನೋಂದಣಿ ಕಾರ್ಯ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ 200 ಯುನಿಟಗಿಂತ ಅಧಿಕ ಬಳಕೆ‌ಮಾಡುತ್ತಿರುವವರ ಸಂಖ್ಯೆ 3,998 ಇದೆ. ಜೂನ 10ರೊಳಗಾಗಿ ನೊಂದಣಿ‌ಕಾರ್ಯ ಪೂರ್ಣಗೊಳಿಸಲು ಅಧಿಕಾರಿಗೆ ಸೂಚನೆ ನೀಡಲಾಗಿದೆ.

ಅನ್ನಭಾಗ್ಯ: ಅಂತ್ಯೋದಯ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿದ ಕುಟುಂಬದ ಸದಸ್ಯರಿಗೆ ಪ್ರತಿ ಮಾಹೆ 10 ಕೆ.ಜಿ. ಉಚಿತ ಅಕ್ಕಿ ಪೂರೈಸುವ ಯೋಜನೆ ಇದಾಗಿದೆ. ಜಿಲ್ಲೆಯಲ್ಲಿ 28,586 ಅಂತ್ಯೋದಯ ಪಡಿತರ ಚೀಟಿದಾರರು ಹಾಗೂ 2,27,914 ಬಿ.ಪಿ.ಎಲ್ ಪಡಿತರ ಚೀಟಿದಾರರಿದ್ದಾರೆ. ಪ್ರತಿ ಸದಸ್ಯರಿಗೆ ಹೆಚ್ಚುವರಿ 5 ಕೆ.ಜಿ.ಅಕ್ಕಿಗೆ ತಗಲುವ ಮೊತ್ತ 170 ರೂ ಗಳನ್ನು ನೇರವಾಗಿ ಪಡಿತರದಾರರಿಗೆ ಡಿ.ಬಿ.ಓ.ಟಿ ಮೂಲಕ ಪಾವತಿಸಲಾಗುವದು. ಬಿ.ಪಿ.ಎಲ್ ಪಡಿತರದಾರರಿಗೆ 12,27,23,680 ರೂ ಗಳು ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ 1,89,71,830 ರೂ. ಮೊತ್ತವನ್ನು ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಗೃಹಲಕ್ಷ್ಮೀ: ಜಿಲ್ಲೆಯ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ನೇರ ವರ್ಗಾವಣೆ ಮಾಡುವ ಯೋಜನೆ ಇದಾಗಿದೆ. ಜಿಲ್ಲೆಯಲ್ಲಿ ಬಿ.ಪಿ.ಎಲ್ ಪಡಿತರದಾರರು 2.28 ಲಕ್ಷ ಕುಟುಂಗಳಿದ್ದು, ಅಂತ್ಯೋದಯ 28,623 ಪಡಿತರ ಚೀಟಿದಾರರು, ಎ.ಪಿ.ಎಲ್ 38,455 ಚೀಟಿದಾರರಿದ್ದು ಮನೆಯ ಯಜಮಾನಿಗೆ ಹಣ ವರ್ಗಾವಣೆ ಮಾಡಲು ಮಾಹಿತಿ ಸಂಗ್ರಹ ಕಾರ್ಯ ಪ್ರಗತಿಯಲ್ಲಿದೆ.

ಯುವನಿಧಿ: ನಿರುದ್ಯೋಗಿ ಪದವೀದರರಿಗೆ 3000 ರೂ. ನಿರುದ್ಯೋಗಿ ಡಿಪ್ಲೋಮಾ ಪದವಿದರರಿಗೆ 1500 ರೂ.ಗಳನ್ನು ನೀಡುವ ಯೋಜನೆ ಯುವ ನಿಧಿಯಾಗಿದೆ. ಈ ಹೋಜನೆ ಅನುಷ್ಠಾನ ಹಾಗೂ ನೊಂದಣಿಗೆ ಪ್ರಕ್ರಿಯೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರಭು ಬುರಬುರೆ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್‌ ಅದ್ಯಕ್ಷ ಅಶೋಕ ಮಂದಾಲಿ ಇದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!