ನರಗುಂದ ಡಿವೈಎಸ್ಪಿ ಶಂಕರ್ ರಾಗಿ ವರ್ಗಾವಣೆ
Advertisement
ವಿಜಯಸಾಕ್ಷಿ ಸುದ್ದಿ, ಗದಗ:
ಜಿಲ್ಲೆಯ ನರಗುಂದ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಆಗಿದ್ದ ಶಂಕರ್ ಎಂ.ರಾಗಿ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರು ಬುಧವಾರ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಉಪ ವಿಭಾಗದ ಡಿವೈಎಸ್ಪಿ ಆಗಿದ್ದ ಈಗನಗೌಡರ್ ವೈ.ಎಸ್. ಅವರು ನರಗುಂದ ಡಿವೈಎಸ್ಪಿ ಆಗಿ ನೇಮಕಗೊಂಡಿದ್ದಾರೆ.
ನರಗುಂದದ ಪಟ್ಟಣದಲ್ಲಿ ಗಲಭೆ, ಅಮಾಯಕ ಯುವಕನ ಕೊಲೆ ಪ್ರಕರಣದ ಬಳಿಕ ನರಗುಂದ ಪೊಲೀಸ್ ಠಾಣೆಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಮೊನ್ನೆಯಷ್ಟೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಸಿಪಿಐ ನಂದೀಶ್ವರ ಕುಂಬಾರ್ ಅವರನ್ನು ಅಮಾನತು ಮಾಡಿ ಬೆಳಗಾವಿ ಉತ್ತರ ವಿಭಾಗದ ಐಜಿಪಿ ಸತೀಶ್ ಕುಮಾರ್ ಅವರು ಆದೇಶಿಸಿದ್ದರು. ಈ ಬೆನ್ನಲ್ಲೇ ಡಿವೈಎಸ್ಪಿ ಶಂಕರ್ ರಾಗಿ ವರ್ಗಾವಣೆಯಾಗಿದ್ದಾರೆ.