ವಿದ್ಯುತ್ ಅವಘಡ; ಅಪಾರ ಪ್ರಮಾಣದ ಬೆಳೆ ಹಾನಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ

Advertisement

ವಿದ್ಯುತ್ ಅವಘಡದಿಂದ ಪಂಪ್‌ಸೆಟ್ ಮತ್ತು ಹೊಲದಲ್ಲಿನ ಬೆಳೆ ಹಾನಿಯಾಗಿರುವ ಘಟನೆ ತಾಲೂಕಿನ ಒಡೆಯರ ಮಲ್ಲಾಪುರ ಗ್ರಾಮದಲ್ಲಿ ಗುರುವಾರ ಜರುಗಿದೆ.

ಗ್ರಾಮದ ರೈತ ಪದ್ಮನಗೌಡ ಗಂಗನಗೌಡ ಪಾಟೀಲ ಇವರಿಗೆ ಸಂಬಂಧಿಸಿದ ನೀರಾವರಿಯ 4 ಎಕರೆ ಹೊಲದಲ್ಲಿನ ಶತಾವರಿ ಬೆಳೆ ಮತ್ತು ಪಂಪ್‌ಸೆಟ್ ಸಂಪೂರ್ಣ ಬೆಂಕಿಗಾಹುತಿಯಾಗಿ ಅಂದಾಜು 5ಲಕ್ಷ ರೂ. ಹಾನಿಯಾಗಿದೆ ಎಂದು ರೈತ ಅಳಲನ್ನು ತೋಡಿಕೊಂಡರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಯಶಸ್ವಿಯಾಗಿ ಹೆಚ್ಚಿನ ಅನಾಹುತ ತಡೆದರು.
ಈ ಹಿಂದೆ ಗ್ರಾಮದಲ್ಲಿ ಹೆಸ್ಕಾಂ ಅಧಿಕಾರಿಗಳ ನೇತೃತ್ವದಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮ ಜರುಗಿದಾಗ ರೈತ ಪದ್ಮನಗೌಡ ಪಾಟೀಲ ಪಂಪ್‌ಸೆಟ್ ಓವರ್‌ಲೋಡ್ ವಿದ್ಯುತ್ ಪ್ರಸರಣ ಆಗುತ್ತಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಈ ವೇಳೆ ಆ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅನಾಹುತ ಸಂಭವಿಸಿದೆ. ರೈತನ ಸಮಸ್ಯೆಯನ್ನು ಅಧಿಕಾರಿಗಳು ಪರಿಗಣನೆಗೆ ತೆಗೆದುಕೊಂಡು ಆಗಿರುವ ಹಾನಿಗಳನ್ನು ಹೆಸ್ಕಾಂ ಇಲಾಖೆಯೆ ನೇರವಾಗಿ ಹೊಣೆ ಹೊತ್ತು ಸೂಕ್ತ ಪರಿಹಾರ ನೀಡಬೇಕೆಂದು ಜೆಡಿಎಸ್ ತಾಲೂಕ ಅಧ್ಯಕ್ಷ ಪದ್ಮರಾಜ ಪಾಟೀಲ ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here