HomeCrime Newsವಿದ್ಯುತ್ ಅವಘಡ; ಅಪಾರ ಪ್ರಮಾಣದ ಬೆಳೆ ಹಾನಿ

ವಿದ್ಯುತ್ ಅವಘಡ; ಅಪಾರ ಪ್ರಮಾಣದ ಬೆಳೆ ಹಾನಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ

ವಿದ್ಯುತ್ ಅವಘಡದಿಂದ ಪಂಪ್‌ಸೆಟ್ ಮತ್ತು ಹೊಲದಲ್ಲಿನ ಬೆಳೆ ಹಾನಿಯಾಗಿರುವ ಘಟನೆ ತಾಲೂಕಿನ ಒಡೆಯರ ಮಲ್ಲಾಪುರ ಗ್ರಾಮದಲ್ಲಿ ಗುರುವಾರ ಜರುಗಿದೆ.

ಗ್ರಾಮದ ರೈತ ಪದ್ಮನಗೌಡ ಗಂಗನಗೌಡ ಪಾಟೀಲ ಇವರಿಗೆ ಸಂಬಂಧಿಸಿದ ನೀರಾವರಿಯ 4 ಎಕರೆ ಹೊಲದಲ್ಲಿನ ಶತಾವರಿ ಬೆಳೆ ಮತ್ತು ಪಂಪ್‌ಸೆಟ್ ಸಂಪೂರ್ಣ ಬೆಂಕಿಗಾಹುತಿಯಾಗಿ ಅಂದಾಜು 5ಲಕ್ಷ ರೂ. ಹಾನಿಯಾಗಿದೆ ಎಂದು ರೈತ ಅಳಲನ್ನು ತೋಡಿಕೊಂಡರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಯಶಸ್ವಿಯಾಗಿ ಹೆಚ್ಚಿನ ಅನಾಹುತ ತಡೆದರು.
ಈ ಹಿಂದೆ ಗ್ರಾಮದಲ್ಲಿ ಹೆಸ್ಕಾಂ ಅಧಿಕಾರಿಗಳ ನೇತೃತ್ವದಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮ ಜರುಗಿದಾಗ ರೈತ ಪದ್ಮನಗೌಡ ಪಾಟೀಲ ಪಂಪ್‌ಸೆಟ್ ಓವರ್‌ಲೋಡ್ ವಿದ್ಯುತ್ ಪ್ರಸರಣ ಆಗುತ್ತಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಈ ವೇಳೆ ಆ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅನಾಹುತ ಸಂಭವಿಸಿದೆ. ರೈತನ ಸಮಸ್ಯೆಯನ್ನು ಅಧಿಕಾರಿಗಳು ಪರಿಗಣನೆಗೆ ತೆಗೆದುಕೊಂಡು ಆಗಿರುವ ಹಾನಿಗಳನ್ನು ಹೆಸ್ಕಾಂ ಇಲಾಖೆಯೆ ನೇರವಾಗಿ ಹೊಣೆ ಹೊತ್ತು ಸೂಕ್ತ ಪರಿಹಾರ ನೀಡಬೇಕೆಂದು ಜೆಡಿಎಸ್ ತಾಲೂಕ ಅಧ್ಯಕ್ಷ ಪದ್ಮರಾಜ ಪಾಟೀಲ ಆಗ್ರಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img