ವಿಜಯಸಾಕ್ಷಿ ಸುದ್ದಿ, ಗದಗ
ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದವರ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಮದ್ಯ ಜಪ್ತಿ ಮಾಡಿದ್ದಾರೆ.
ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಅಬಕಾರಿ ಪೊಲೀಸರು, ಐದು ಜನರನ್ನು ಬಂಧಿಸಿ, ಅವರಿಂದ ಮೂರು ಬೈಕ್ ಸೀಜ್ ಮಾಡಿದ್ದಾರೆ.

ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ-ಹೊಳೆಇಟಗಿ ರಸ್ತೆಯಲ್ಲಿ ಬೈಕ್ ನಲ್ಲಿ ಮದ್ಯ ಸಾಗಿಸುತ್ತಿದ್ದ ಸಂತೋಷ ಹಾಗೂ ಮಹೇಶ್ ಎಂಬ ಇಬ್ಬರನ್ನು ಬಂಧಿಸಿ, ಅವರಿಂದ ಮದ್ಯ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ.

ಗದಗ ತಾಲೂಕಿನ ಬೆಳಧಡಿ ತಾಂಡಾದ ಶಂಕರ್ ಎಂಬಾತನನ್ನು ಬಂಧಿಸಿ, ಆತನಿಂದ 5,570 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಗದಗನ ಕಳಸಾಪೂರ ರಸ್ತೆಯ ಲ್ಲಿ ಬೈಕ್ ನಲ್ಲಿ ಮದ್ಯ ಸಾಗಿಸುತ್ತಿದ್ದ ರಾಜು ಎಂಬಾತನನ್ನು ಬಂಧಿಸಿ, ಆತನಿಂದ 6058 ರೂ. ಮೌಲ್ಯದ ಮದ್ಯ ಹಾಗೂ ಬೈಕ್ ಸೀಜ್ ಮಾಡಲಾಗಿದೆ.

ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ಮದ್ಯ ಸಾಗಿಸುತ್ತಿದ್ದ ಆರೋಪಿ ಆನಂದ ಎಂಬಾತನನ್ನು ಬಂಧಿಸಿ, ಆತನಿಂದ 15,902ರೂ ಮೌಲ್ಯದ ಮದ್ಯ ಹಾಗೂ ಬೈಕ್ ಸೀಜ್ ಮಾಡಲಾಗಿದೆ.
ಈ ಕುರಿತು ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಬಕಾರಿ ಡಿಸಿ ವೈ ಭರತೇಶ್ ಮಾಹಿತಿ ನೀಡಿದ್ದಾರೆ.