ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ
ವೇಗವಾಗಿ ಹೊರಟಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಹಳ್ಳಿಕೇರಿ-ಬನ್ನಿಕೊಪ್ಪ ಮಧ್ಯೆ ಸಂಜೆ ನಡೆದಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ನಿವಾಸಿ ಅಲ್ಲಾಭಕ್ಷಿ (35) ಮೃತಪಟ್ಟ ದುರ್ಧೈವಿ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ನಾಲ್ವರು ಲಕ್ಕುಂಡಿ ಗ್ರಾಮದವರೆಂದು ತಿಳಿದು ಬಂದಿದೆ.
ಮೃತ ಅಲ್ಲಾಭಕ್ಷಿ ಕಾರಿನಲ್ಲಿ ಸಿಲುಕಿ ಮೃತಪಟ್ಟರೆ, ಉಳಿದವರು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ದೃಶ್ಯಗಳು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತದ ಸೌಂಡಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಜನ ಓಡೋಡಿ ಬಂದು ನೋಡಿ ಮಮ್ಮಲ ಮರುಗಿದರು. ಅಷ್ಟೇ ಅಲ್ಲ ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಐವರು ಗೆಳೆಯರಾಗಿದ್ದು ಬನ್ನಿಕೊಪ್ಪದ ಕಡೆ ಹೊರಟಿದ್ದರು ಎನ್ನಲಾಗಿದೆ. ಗಾಯಗೊಂಡವರು ಸದ್ಯ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.



