ಭಾರೀ ಮಳೆ ಹಿನ್ನೆಲೆ; ಕರ್ತವ್ಯಕ್ಕೆ ತೆರಳಿದ್ದ ಇಬ್ಬರು ಮುಂಡರಗಿ ಠಾಣಾ ಪೊಲೀಸರು ನಾಪತ್ತೆ?

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆ ಬಂದೋಬಸ್ತ್ ಗೆ ತೆರಳಿದ್ದ ಮುಂಡರಗಿ ಠಾಣೆಯ ಇಬ್ಬರು ಪೊಲೀಸರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಮಹೇಶ್ ವಕ್ರದ ಹಾಗೂ ನಿಂಗಪ್ಪ ಹಲವಾಗಲಿ ಎಂಬ ಪೊಲೀಸರು ನಿನ್ನೆ ಗಜೇಂದ್ರಗಡ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ರಿಡ್ ಗೆ ಮುತ್ತಿಗೆ ಹಾಕುವ ಪ್ರತಿಭಟನೆ ಇತ್ತು. ಅದರ ಬಂದೋಬಸ್ತ್ ಗೆ ಮುಂಡರಗಿ ಠಾಣೆಯಿಂದ ಹತ್ತು ಜನ ಸಿಬ್ಬಂದಿ ಹೋಗಿದ್ದರು ಎನ್ನಲಾಗಿದೆ.

ಅದರಲ್ಲಿ ಎಂಟು ಜನ ಸಿಬ್ಬಂದಿ ಬಸ್, ಜೀಪ ಮೂಲಕ ವಾಪಾಸು ಠಾಣೆಗೆ ಬಂದು ವರದಿ ಮಾಡಿಕೊಂಡಿದ್ದಾರೆ. ಬೈಕ್ ಮೂಲಕ ಕರ್ತವ್ಯಕ್ಕೆ ತೆರಳಿದ್ದ ಮಹೇಶ್ ಹಾಗೂ ನಿಂಗಪ್ಪ ಇದುವರೆಗೂ ವರದಿ ಮಾಡಿಕೊಂಡಿಲ್ಲ. ಅಷ್ಟೇ ಅಲ್ಲ ಅವರ ಮೊಬೈಲ್ ಫೋನ್ ಕೂಡ ರೀಚ್ ಆಗ್ತಾ ಇಲ್ಲ. ಹೀಗಾಗಿ ಹಿರಿಯ ಅಧಿಕಾರಿಗಳು ಅವರ ಪತ್ತೆಗೆ ಶೋಧ ನಡೆಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ನಿನ್ನೆ ರಾತ್ರಿ ಮುಂಡರಗಿಗೆ ವಾಪಾಸು ಬರುವಾಗ ಭಾರೀ ಮಳೆ ಸುರಿಯುತ್ತಿತ್ತು. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತೊಂಡಿಹಾಳ ಹಾಗೂ ಬಂಡಿಹಾಳ ಹತ್ತಿರ ಹಳ್ಳ ಉಕ್ಕಿ ಹರಿಯುತ್ತಿತ್ತು. ಅದೇ ಹಳ್ಳದಲ್ಲಿ ಬೈಕ್ ಮೂಲಕ ದಾಟುವಾಗ ತೇಲಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ ಮಹೇಶ್ ನಿಗೆ ಈಜು ಬರುತ್ತಿತ್ತು ಎಂದು ಹೇಳಲಾಗುತ್ತದೆ. ಸದ್ಯಕ್ಕೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಎಸ್ಪಿ ಶಿವಪ್ರಕಾಶ್ ದೇವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

LEAVE A REPLY

Please enter your comment!
Please enter your name here