ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ;  ಚಾಲಕ ಸೇರಿ ಮೂವರಿಗೆ ಗಂಭೀರ ಗಾಯ

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ

Advertisement

ತಾಲೂಕಿನ ನೆಲ್ಲೂರ ಪ್ಯಾಟಿ ಗ್ರಾಮದ ಹೊರವಲಯದ  ಬಳಿ ಶನಿವಾರ ಬೆಳಗ್ಗೆ ಲಾರಿಯೊಂದು  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮವಾಗಿ ಚಾಲಕ ಸೇರಿ ಮೂವರು ಗಾಯಗೊಂಡ ಘಟನೆ ಜರುಗಿದೆ.

ರೋಣ ಪಟ್ಟಣದಿಂದ ನೆಲ್ಲೂರ ಪ್ಯಾಟಿ ಗ್ರಾಮಕ್ಕೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ ನೆಲ್ಲೂರ್ ಪ್ಯಾಟಿ ಗ್ರಾಮದ ಸುರೇಶ್ ಎಂಬ ಬಾಲಕನಿಗೆ ತಲೆಗೆ ಹೊಡೆತ ಬಿದ್ದಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗಾಯಗೊಂಡವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಗಜೇಂದ್ರಗಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here