ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ದೇಶದ ಎಲ್ಲೆಡೆ ಹಿಂದೂ ಗ್ರಾಹಕರಿಗೆ ಒತ್ತಾಯದಿಂದ ಹಲಾಲ್ ವಸ್ತುಗಳನ್ನು ಮಾರಾಟ ಮಾಡುವಂತಾಗಬಾರದು ಮತ್ತು ಹಿಂದೂ ಸಮಾಜಕ್ಕಾಗಿ ಹಲಾಲ್ ರಹಿತ ವಸ್ತುಗಳನ್ನು ಒದಗಿಸಬೇಕು ಹಾಗೂ ಹಲಾಲ್ ಪ್ರಮಾಣಪತ್ರ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಗುರುವಾರ ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಸದ್ಯ ಭಾರತೀಯ ಮುಸಲ್ಮಾನರಿಂದ ಪ್ರತಿಯೊಂದು ಪದಾರ್ಥ, ವಸ್ತು ಇಸ್ಲಾಂಗನುಸಾರ ಅರ್ಥಾತ್ ಹಲಾಲ್ ಇರಬೇಕೆಂದು ಬೇಡಿಕೆಯಾಗುತ್ತಿದೆ. ಈ ಬೇಡಿಕೆಯು ಕೇವಲ ಮಾಂಸಕ್ಕಾಗಿ ಸೀಮಿತವಾಗಿರದೇ ಧಾನ್ಯ, ಹಣ್ಣು, ಸೌಂದರ್ಯ ಪ್ರಸಾಧನಗಳು, ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂತರ್ಗತ ಆಹಾರ ಸುರಕ್ಷೆ ಮತ್ತು ಗುಣಮಟ್ಟದ ಪ್ರಾಧಿಕಾರ ಹಾಗೂ ಪ್ರತಿಯೊಂದು ರಾಜ್ಯದಲ್ಲಿ ಸ್ವತಂತ್ರವಾದಂತಹ ಆಹಾರ ಮತ್ತು ಔಷಧಿ ಆಡಳಿತ ವಿಭಾಗ ಅಸ್ತಿತ್ವದಲ್ಲಿರುವಾಗ ಇದನ್ನು ಮುಸಲ್ಮಾನ ಸಂಘಟನೆಗಳಿಂದ ನೀಡಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಜಾತ್ಯತೀತ ಭಾರತದಲ್ಲಿ ಧಾರ್ಮಿಕ ಆಧಾರದಲ್ಲಿ ಸರ್ಟಿಫಿಕೇಶನ್ ಇದು ಕಾನೂನುಬಾಹಿರವಾಗಿದೆ. ಒತ್ತಾಯಪೂರ್ವಕ ಹಲಾಲ್ ಪದಾರ್ಥಗಳನ್ನು ತಿನ್ನಿಸಿ ನೀವು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಲ್ಲದೆ ಹಿಂದೂ ವ್ಯಾಪಾರಿಗಳಿಗೂ ಕಡ್ಡಾಯ ಮಾಡಲಾಗುತ್ತಿದೆ.
ಹಲಾಲ್ ಪ್ರಮಾಣಪತ್ರದ ಹೆಸರಿನಲ್ಲಿ ದೇಶಾದ್ಯಂತ ಹಿಂದೂ ವ್ಯಾಪಾರಿಗಳಿಂದ ಸಾವಿರಾರು ಕೋಟಿ ರೂ. ಲೂಟಿ ಮಾಡಲಾಗುತ್ತಿದೆ. ಹೀಗಾಗಿ ಇದು ಕೇವಲ ಧರ್ಮಕ್ಕೆ ಸಂಬಂಧಿಸಿರದೇ ಇಸ್ಲಾಮಿ ಆರ್ಥಿಕ ವ್ಯವಸ್ಥೆಯಾಗುತ್ತಿದೆ. ಇದರ ಮೂಲಕ ಸಂಗ್ರಹವಾಗುತ್ತಿರುವ ಹಣ ಭಯೋತ್ಪಾದನಾ ಚಟುವಟಿಕೆಗಳಿಗೆ ಉಪಯೋಗ ಮಾಡಲಾಗುತ್ತಿದೆ. ಇದು ಹಿಂದೂಗಳ ಮೇಲೆ ಮಾಡಿದ ಜಿಜಿಯಾ ತಲೆದಂಡವಾಗಿದೆ.
ಹೀಗಾಗಿ ಸಂವಿಧಾನ ವಿರೋಧಿಯಾಗಿರುವ ಹಲಾಲ್ ಪ್ರಮಾಣ ಪತ್ರವನ್ನು ಕೇಂದ್ರ ಸರ್ಕಾರ ಕೂಡಲೇ ನಿಷೇಧಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಈ ವೇಳೆ ಅರುಣ ಮೆಕ್ಕಿ, ವೀರಣ್ಣ ಮೆಣಸಿನಕಾಯಿ, ವೀರೇಶ ಚಿಂಚಲಿ, ಅಮೀತ್ ಗುಡಗೇರಿ, ಬಸವನಗೌಡ ಪಾಟೀಲ್, ಶಂಕರ ಕುಂಬಾರ, ಪ್ರವೀಣ ಬನ್ನಿಕೊಪ್ಪ, ನಾಗಪ್ಪ ಓಂಕಾರಿ, ಯಲ್ಲಪ್ಪಗೌಡ ಪಾಟೀಲ್, ದುಂಡಪ್ಪ ಸವಣೂರ, ಸೇರಿದಂತೆ ಅನೇಕರು ಹಾಜರಿದ್ದರು.
.