ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು
ವಿಜಯಸಾಕ್ಷಿ ಸುದ್ದಿ, ಗದಗ
ತಾಲೂಕಿನ ಹರ್ಲಾಪೂರ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಸುಮಂಗಲಾ ಕೊಟ್ರಪ್ಪ ಚಟ್ರಿ ಆಯ್ಕೆಯಾಗಿದ್ದಾರೆ.

ಸೋಮುನಗೌಡ ಕೆಂಚನಗೌಡ್ರ ಇವರು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆ ಕಾರಣಕ್ಕಾಗಿ ನೆಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಸುಮಂಗಲಾ ಕೊಟ್ರಪ್ಪ ಚಟ್ರಿ ನಾಮಪತ್ರ ಸಲ್ಲಿಸಿದ್ದರು. ಪ್ರತಿಸ್ಪರ್ಧಿಯಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ದು ಯಳವಾಡ ನಾಮಪತ್ರ ಸಲ್ಲಿಸಿದ್ದರು.
ಹರ್ಲಾಪೂರ ಗ್ರಾಮ ಪಂಚಾಯತಿ ಒಟ್ಟು 12 ಸ್ಥಾನವನ್ನು ಹೊಂದಿದ್ದು, ಅದರಲ್ಲಿ ಸುಮಂಗಲಾ ಚಟ್ರಿ 7 ಮತಗಳನ್ನು ಪಡೆದು ಜಯಭೇರಿ ಬಾರಿಸಿದರು. ಆ ಮೂಲಕ ಗ್ರಾಮ ಪಂಚಾಯತಿ ಕಾಂಗ್ರೆಸ್ ಪಾಲಾಯಿತು. ಇದರಿಂದಾಗಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಗೌಡ ಪಾಟೀಲ್, ಶಿವಾನಂದ ಪಟ್ಟೆದ, ಅಡಿವೆಪ್ಪ ಗೌಡಪ್ಪನವರ, ವೀಣಾ ಕಾತರಕಿ, ನಿರ್ಮಲಾ ಕೊತಪ್ಪನವರ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
ಚುನಾವಣಾ ಅಧಿಕಾರಿಯಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯನಿರ್ವಹಿಸಿದರು. ಪಂಚಾಯತಿ ಪಿಡಿಒ ಈ ಸಂದರ್ಭದಲ್ಲಿ ಇದ್ದರು.