ಹೆಸ್ಕಾಂನ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಸಾವು…..
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಹೆಸ್ಕಾಂನ ಜಾಗೃತದಳದ ಪಿಎಸ್ಐ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.
ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಬಳಿ ನಡೆದ ಈ ಭೀಕರ ಅಪಘಾತದಲ್ಲಿ, ಹೆಸ್ಕಾಂನ ಜಾಗೃತದಳದ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ(40) ಸ್ಥಳದಲ್ಲಿಯೇ ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಬಾಗಲಕೋಟ ಜಿಲ್ಲೆಯ ಅಮೀನಗಡ ಪಿಎಸ್ಐ ಆಗಿದ್ದ ಮೃತರು, ಸದ್ಯ ಚುನಾವಣಾ ಹಿನ್ನೆಲೆಯಲ್ಲಿ ಹೆಸ್ಕಾಂನ ಜಾಗೃತದಳಕ್ಕೆ ವರ್ಗಾವಣೆ ಆಗಿದ್ದರು.

ಮೃತ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಅವರು, ಮೂಲತಃ ನವಲಗುಂದ ತಾಲೂಕಿನ ಕುಮಾರಗೊಪ್ಪ ಗ್ರಾಮದ ನಿವಾಸಿಯಾಗಿದ್ದರು.

ಈ ಹಿಂದೆ ಗದಗ ಜಿಲ್ಲೆಯಲ್ಲೂ ಹಲವು ವರ್ಷಗಳ ಕಾಲ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದ ಮಲ್ಲಿಕಾರ್ಜುನ ಕುಲಕರ್ಣಿ ಅವರು, ಗದಗ ಗ್ರಾಮೀಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ದಕ್ಷತೆ ಮೆರದಿದ್ದರು.
ಅವರ ಅಕಾಲಿಕ ಸಾವಿನಿಂದ ಕುಟುಂಬ ವರ್ಗದವರ ಆಕ್ರಂಧನ ಮುಗಿಲ ಮುಟ್ಟಿದ್ದು, ಗದಗ ಜಿಲ್ಲೆಯ ಸಿಬ್ಬಂದಿಗಳನ್ನು ಶೋಕ ಸಾಗರದಲ್ಲಿ ಮುಳಗಿಸಿದೆ.