ವಿಜಯಸಾಕ್ಷಿ ಸುದ್ದಿ, ಕಲಬುರಗಿ
ಅಕ್ರಮವಾಗಿ ನಾಡ ಪಿಸ್ತೂಲ್ ಹೊಂದಿದ ಆರೋಪದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲ ಆರೋಪಿಗಳು ತಲೆಮರೆಸಿಕೊಂಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಯಡ್ರಾಮಿ ಠಾಣೆಯ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಝಳಕಿ ಗ್ರಾಮದ ಸೈಫನ್ ಸಾಬ್ ಶಿರೂರು ಹಾಗೂ ಗುರುಲಿಂಗಪ್ಪ ಹಡಪದ ನಾಡ ಪಿಸ್ತೂಲ್ ಹೊಂದಿದ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾರೆ.
ಬಂಧಿತರಿಂದ ಒಂದು ನಾಡ ಪಿಸ್ತೂಲ್, ಮೂರು ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ. ತಲೆಮರೆಸಿಕೊಂಡ ಕೆಲ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.



