HomeCrime Newsಭಾರಿ ಮಳೆ ಹಿನ್ನೆಲೆ; ಹಳ್ಳದಲ್ಲಿ ಕೊಚ್ಚಿ ಹೋದ ನಾಲ್ವರು ಮಹಿಳೆಯರು

ಭಾರಿ ಮಳೆ ಹಿನ್ನೆಲೆ; ಹಳ್ಳದಲ್ಲಿ ಕೊಚ್ಚಿ ಹೋದ ನಾಲ್ವರು ಮಹಿಳೆಯರು

Spread the love

ವಿಜಯಸಾಕ್ಷಿ ಸುದ್ದಿ, ಯಲಬುರ್ಗಾ

ಯಲಬುರ್ಗಾ ತಾಲೂಕಿನ ಸಂಕನೂರು ಗ್ರಾಮದ ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿಕೊಂಡು ಹೋದ ದುರ್ಘಟನೆ ಶನಿವಾರ ರಾತ್ರಿ ಜರುಗಿದೆ.

ಹಳ್ಳದಲ್ಲಿ ಕೊಚ್ಚಿ ಹೋದವರನ್ನು ಸಂಕನೂರು ಗ್ರಾಮದ ಗಿರಿಜಾ (30), ಭುವನೇಶ್ವರಿ (33) ರೇಖಾ (43) ವೀಣಾ (22) ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಮಹಿಳೆಯರು ಗ್ರಾಮದ ಸಮೀಪ ಇರುವ ಸೀಡ್ಸ್ ಕಂಪನಿಯಲ್ಲಿ ಹತ್ತಿ ಬೀಜ ಆಯಲು ಹೋಗಿ ಮನೆಗೆ ವಾಪಾಸ್ಸಾಗುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸೀಡ್ಸ್ ಕಂಪನಿಗೆ ನಿತ್ಯವೂ ಹತ್ತಾರು ಜನರು ಕೆಲಸಕ್ಕೆ ತೆರಳುತ್ತಾರೆ. ಎಂದಿನಂತೆ ಇವರೂ ತೆರಳಿದ್ದಾರೆ. ಆದರೆ ಸಂಜೆ ಎರಡು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದ ಪರಿಣಾಮ ಗ್ರಾಮದ ಸಂಕನೂರು ಹಳ್ಳ ಭರ್ತಿಯಾಗಿ ಹರಿದಿದೆ.

ಈ ಹಳ್ಳದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ ಎಂದು ಮಹಿಳೆಯರು ನೀರಿಗೆ ಇಳಿದಿದ್ದಾರೆ. ನೀರಿನ ರಭಸಕ್ಕೆ ಇಬ್ಬರು ಕೊಚ್ಚಿ ಹೋಗಿದ್ದು, ಅವರನ್ನು ರಕ್ಷಣೆ‌ ಮಾಡಲು ಮತ್ತೆ ಇಬ್ಬರು ಹಳ್ಳದಲ್ಲಿ ಇಳಿದಿದ್ದಾರೆ. ಅವರೂ ಸಹ ನೀರಿನ ಸೆಳೆತಕ್ಕೆ ಸಿಲುಕಿದ್ದಾರೆ.

ಒಂದು ಗಂಟೆ ಕಾಲ ಗಿರಿಜಾ ಹಾಗೂ ಭುವನೇಶ್ವರಿ ಎನ್ನುವ ಇಬ್ಬರು ಮಹಿಳೆಯರು ಹಳ್ಳದ ಮಧ್ಯೆ ಗಿಡದ ಟೊಂಗೆ ಹಿಡಿದುಕೊಂಡಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥರು ಅವರನ್ನು ರಕ್ಷಣೆ ಮಾಡಲು ಹಗ್ಗ, ಏಣಿ ಸೇರಿದಂತೆ ಇತರೆ ಪ್ರಯತ್ನ ಮಾಡಿದ್ದಾರೆ. ಆದರೆ ನೀರಿ‌ನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಗಿಡದ ಟೊಂಗೆ ಹಿಡಿದು ನಿಂತಿದ್ದ ಅವರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಯಲಬುರ್ಗಾ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!