ಎಮ್ಮೆಗೆ ಡಿಕ್ಕಿ ಹೊಡೆದ ಸಾರಿಗೆ ಬಸ್

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

Advertisement

ಸಾರಿಗೆ ಇಲಾಖೆಯ ಬಸ್ಸೊಂದು ಎಮ್ಮೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಎಮ್ಮೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಬಸ್ ಅಡಿಯಲ್ಲಿ ಸಿಲುಕಿದ ಎಮ್ಮೆಯನ್ನು ಸಾರ್ವಜನಿಕರು ಪ್ರಯಾಸದಿಂದ ರಕ್ಷಿಸಿದ್ದಾರೆ. ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಸಾರಿಗೆ ಇಲಾಖೆಯ ಬಸ್ ಬಾಗಲಕೋಟದಿಂದ ಹುಬ್ಬಳ್ಳಿಗೆ ಹೊರಟಿತ್ತು.

ಈ ವೇಳೆ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಎಮ್ಮೆಗೆ ಬಸ್ ಡಿಕ್ಕಿ ಹೊಡೆದಿದೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಈ ಅಪಘಾತದಲ್ಲಿ ಗಾಯಗೊಂಡ ಎಮ್ಮೆಯನ್ನು ಬಸ್ಸಿನ ಅಡಿಯಿಂದ ಹೊರತೆಗೆದು ಸಾರ್ವಜನಿಕರು ಮಾನವೀಯತೆ ಮೆರೆದಿದ್ದಾರೆ.


Spread the love

LEAVE A REPLY

Please enter your comment!
Please enter your name here