ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ಸಮೀಪದ ದೊಡ್ಡೂರು ಗ್ರಾಮದ ಹತ್ತಿರದಲ್ಲಿರುವ ಕಬ್ಬಿನ ಹೊಲಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಆಕಸ್ಮಿಕ ಬೆಂಕಿ ತಗುಲಿ, ೩ ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ.
ದೊಡ್ಡೂರು ಗ್ರಾಮದ ರತ್ನವ್ವ ಬಸವರಾಜ ಗುಳೇದ ಎನ್ನುವವರ 3 ಎಕರೆ ಹೊಲದಲ್ಲಿ ಕಬ್ಬು ಬೆಳೆಯಲಾಗಿದ್ದು, ಏಕಾಏಕಿ ಬೆಂಕಿ ಹತ್ತಿಕೊಂಡು ಇಡೀ ಹೊಲವನ್ನು ವ್ಯಾಪಿಸಿಕೊಂಡಿತ್ತು. ತಕ್ಷಣ ಊರಿನ ಹಿರಿಯರು, ಯುವಕರು ಸೇರಿ ಬೆಂಕಿ ಆರಿಸಲು ಪ್ರಯತ್ನಿಸಿದರು.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು. ಸುಮಾರು 3 ಎಕರೆಯಷ್ಟು ಕಬ್ಬು ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಬಂಧಿಸಿದ ಇಲಾಖೆಯವರು ಈ ರೈತ ಮಹಿಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮದ ಹಿರಿಯರು ಆಗ್ರಹಿಸಿದ್ದಾರೆ.