ಲೋಕಾಯುಕ್ತರ ದಾಳಿ, ಬಿಲ್ ಪಾವತಿಸಲು 1. 50 ಲಕ್ಷ ರೂ. ಲಂಚ ಕೇಳಿದ್ದ ಸಿಡಿಪಿಒ, ಸಿಬ್ಬಂದಿ ಬಲೆಗೆ

0
Spread the love

ಡಾಬಾವೊಂದರಲ್ಲಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತರ ದಾಳಿ……

Advertisement

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ

ಅಂಗನವಾಡಿಗಳಿಗೆ ಆಹಾರ ಪೂರೈಸಿದ್ದ ಬಿಲ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಜೇಂದ್ರಗಡ ಸಿಡಿಪಿಒ ಹಾಗೂ ಕಚೇರಿ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ರೋಣ ತಾಲೂಕಿನ ಸಿಡಿಪಿಒ ಬಸಮ್ಮ ಹೂಲಿ ಎಂಬುವರು ತಮ್ಮ ಸಿಬ್ಬಂದಿ ಜಗದೀಶ್ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

ಗಜೇಂದ್ರಗಡದ ಡಾಬಾವೊಂದರಲ್ಲಿ 1ಲಕ್ಷ 50 ಸಾವಿರ ರೂ. ಗಳನ್ನು ಗುತ್ತಿಗೆದಾರನಿಂದ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ಮಾಡಿದ್ದಾರೆ.

ಕಳೆದ ವರ್ಷ ರೋಣ ತಾಲೂಕಿನ ಅಂಗನವಾಡಿಗಳಿಗೆ ಆಹಾರ ಪೂರೈಕೆ ಮಾಡಿದ್ದ ಅನಿಲ ಎಂಬ ಗುತ್ತಿಗೆದಾರರ 42 ಲಕ್ಷ ರೂ. ಬಿಲ್ ಪಾವತಿಸಲು ಸಿಡಿಪಿಒ ಬಸಮ್ಮ ಒಂದೂವರೆ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಶನಿವಾರ ಮಧ್ಯಾಹ್ನ ಗಜೇಂದ್ರಗಡದ ಡಾಬಾವೊಂದರಲ್ಲಿ ಲಂಚದ ಹಣ ಪಡೆಯುತ್ತಿದ್ದ ಸಿಬ್ಬಂದಿ ಜಗದೀಶ್ ಎಂಬಾತನನ್ನು ಡ್ರಾಪ್ ಮಾಡಲಾಗಿದೆ.

ಗದಗ ಜಿಲ್ಲೆಯ ಲೋಕಾಯುಕ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಸದ್ಯ ಸಿಡಿಪಿಒ ಹಾಗೂ ಸಿಬ್ಬಂದಿ ಇಬ್ಬರನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲು ರೋಣ ಪಟ್ಟಣಕ್ಕೆ ಕರೆದೊಯ್ಯಲಾಗಿದೆ.


Spread the love

LEAVE A REPLY

Please enter your comment!
Please enter your name here