ವಿಜಯಸಾಕ್ಷಿ ಸುದ್ದಿ, ಧಾರವಾಡ:
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ತಡೆಯಾಜ್ಞೆ ನೀಡಿ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದೆ ಎನ್ನಲಾಗಿದೆ.
ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಜ.24ರಂದು ನಡೆದಿದ್ದ ಚುನಾವಣೆಯಲ್ಲಿ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ನ ಸದಸ್ಯರು ನ್ಯಾಯಾಲಯದ ಮೊರೆ ಹೋಗಿದ್ದರು. ಸುಳ್ಳು ದಾಖಲೆ ಸೃಷ್ಟಿಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪಾರದರ್ಶಕವಾಗಿ ನಡೆಸಿಲ್ಲ. ಹೀಗಾಗಿ ಮರು ಚುನಾವಣೆ ಮಾಡುವಂತೆ ಅರ್ಜಿ ಸಲ್ಲಿಸಿತ್ತು.

ಮಂಗಳವಾರ ಕಾಂಗ್ರೆಸ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ಯಾಮಪ್ರಸಾದ್ ಅವರಿದ್ದ ಪೀಠ ಚುನಾವಣೆಗೆ ತಡೆಯಾಜ್ಞೆ ನೀಡಿ, ಫೆ.21ಕ್ಕೆ ವಿಚಾರಣೆ ಮುಂದೂಡಿದೆ.
ಇದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹದಿನಾಲ್ಕು ವರ್ಷಗಳ ಕನಸಿಗೆ ಮಂಕುಬೂದಿ ಎರಚಿದಂತಾಗಿದೆ. ಕಾಂಗ್ರೆಸ್ ಪರವಾಗಿ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಅವರು ವಾದ ಮಂಡಿಸಿದರು.