ಬಿಜೆಪಿ ಅಭ್ಯರ್ಥಿ ಪರ ಶಾಸಕ ಕ್ಯಾಂಪೇನ್: ಕಣ್ಮುಚ್ಚಿ ಕುಳಿತ ಅಧಿಕಾರಿಗಳು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ-ಬೆಟಗೇರಿ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ 48 ಗಂಟೆ ಮುಂಚಿತವಾಗಿ ಅಂದರೆ, ಶನಿವಾರ(ಡಿ.25)ವೇ ಬಹಿರಂಗ ಪ್ರಚಾರ ಮುಕ್ತಾಯಗೊಂಡಿದೆ. ಆದರೆ, ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಅವರು ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ.

ಹೌದು, ಅವಳಿ‌ ನಗರದ 34ನೇ ವಾರ್ಡಿನ ಬಿಜೆಪಿ ಅಭ್ಯರ್ಥಿ ವಿದ್ಯಾವತಿ ಗಡಗಿ ಅವರ ಸಂಬಂಧಿಕರೂ ಎನ್ನಲಾಗುತ್ತಿರುವ ಶಾಸಕ ಯಾದವಾಡ ಅವರು ಕಳೆದ ಒಂದು ವಾರದಿಂದ ಗದಗ ನಗರದಲ್ಲೇ ಠಿಕಾಣಿ ಹೂಡಿದ್ದಾರೆ. ಅಲ್ಲದೇ, ಮುಳಗುಂದ ನಾಕಾದಲ್ಲಿರುವ ಖಾಸಗಿ ಹೋಟೆಲ್ ಒಂದರಲ್ಲಿ ವಾಸ್ತವ್ಯ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ದುರಂತ.

ರಾಜ್ಯ ಚುನಾವಣಾ ಆಯೋಗದ ಪ್ರಕಾರ ‘ ಬಹಿರಂಗ ಪ್ರಚಾರ ಅಂತ್ಯಗೊಂಡ ಬಳಿಕ ಮತದಾರರಲ್ಲದ ಬೆಂಬಲಿಗರು, ರಾಜಕೀಯ ಪಕ್ಷದ ಪದಾಧಿಕಾರಿಗಳು, ಮುಖಂಡರುಗಳು, ಪಕ್ಷದ ಕಾರ್ಯಕರ್ತರು, ಮೆರವಣಿಗೆ, ಪ್ರಚಾರ ಕಾರ್ಯ ನಿರ್ವಹಿಸುವವರು ಇನ್ನಿತರರು ಆ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಗಳ ವ್ಯಾಪ್ತಿಯಲ್ಲಿ ವಾಸ್ತವ್ಯ ಮಾಡುವ ಹಾಗಿಲ್ಲ.

ಆದರೆ, ಕಳೆದ ಒಂದು ವಾರದಿಂದಲೂ ಎಸ್.ಎಸ್.ಯಾದವಾಡ & ಕಂ ಎಂಬ ಭಾರತೀಯ ಜನತಾ ಪಕ್ಷದ ಚಿಹ್ನೆ ಇರುವ ಕಾರೊಂದು ಅವಳಿ ನಗರದಲ್ಲಿ ‌ಓಡಾಡುತ್ತಿದೆ. ಅಷ್ಟೇ ಅಲ್ಲದೆ ಮತದಾನ ದಿನವೂ ಶಾಸಕರ ಬೆಂಬಲಿಗರು ಕಾರ ಸಮೇತ ಮತದಾನ ಕೇಂದ್ರದ ಬಳಿ ಮತದಾರರ ಮನವೊಲಿಸಿತ್ತಿದ್ದರೂ ಚುನಾವಣಾಧಿಕಾರಿಗಳು, ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರು ಆರೋಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here