HomeGadag Newsಅವಳಿ ನಗರದ ಅಭಿವೃದ್ಧಿಗಾಗಿ ಅನಿಲ್ ಮತಭಿಕ್ಷೆ! ಅಭ್ಯರ್ಥಿ ಪರ ಬಿಜೆಪಿ ವಿನೂತನ ಪ್ರಚಾರ

ಅವಳಿ ನಗರದ ಅಭಿವೃದ್ಧಿಗಾಗಿ ಅನಿಲ್ ಮತಭಿಕ್ಷೆ! ಅಭ್ಯರ್ಥಿ ಪರ ಬಿಜೆಪಿ ವಿನೂತನ ಪ್ರಚಾರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ:

ಗದಗ-ಬೆಟಗೇರಿ ಅವಳಿ ನಗರದ ಜನರ ಸಮಸ್ಯೆಗಳನ್ನು ಅರಿಯಲು ಪ್ರತಿ ಮನೆ ಮನೆಗಳಿಗೂ ಭೇಟಿ ನೀಡಿ ಅವರು ನೀಡುವ ಸಲಹೆಗಳನ್ನು ಅರ್ಥೈಯಿಸಿಕೊಂಡು ಕನಿಷ್ಠ 6 ತಿಂಗಳ ಕಾಲಾವಕಾಶದೊಳಗೆ ಸಮಸ್ಯೆಗಳನ್ನು ಪರಿಹರಿಸಿ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು. ಅಲ್ಲದೇ, ಪುನಃ ಅವರ ಮನೆಗಳಿಗೆ ತಿಳಿಸಲಾಗುವುದು’ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಹೇಳಿದರು.

ಸೋಮವಾರ ಹುಡ್ಕೋ ಕಾಲನಿಯ ಬಯಲು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತಭಿಕ್ಷೆ ಅಭಿಯಾನ ಪ್ರಾರಂಭಿಸಿದ ಅವರು 35ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಉಷಾ ಮಹೇಶ್ ದಾಸರ ಅವರ ಪರವಾಗಿ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಕೈಗೊಂಡು ಬಳಿಕ ಮಾತನಾಡಿದರು.

ಅವಳಿ ನಗರದಲ್ಲಿ ಸುಮಾರು 36 ಸಾವಿರ ಮನೆಗಳಿದ್ದು, ಪ್ರತಿನಿತ್ಯ 2000ಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಮತಭಿಕ್ಷೆ ಕೇಳಬೇಕೆಂದು ತೀರ್ಮಾನಿಸಲಾಗಿದೆ. ಅಲ್ಲದೇ, ಈ ಬಾರಿ ಬಿಜೆಪಿ ನಗರಸಭೆ ಅಧಿಕಾರಕ್ಕೆ ಬರುತ್ತದಲ್ಲದೇ, ಅವಳಿ ನಗರದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂಬ ವಿಶ್ವಾಸವಿದೆ’ ಎಂದರು.

ಈ ಹಿಂದೆ ನಗರಸಭೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ದುರಾಡಳಿತ ನಡೆಸಿದೆ. ಅಲ್ಲದೇ, ಕಾಂಗ್ರೆಸ್‌ನದ್ದು ಭ್ರಷ್ಟಚಾರ ಸಿದ್ಧಾಂತವಾಗಿದೆ. ಹೀಗಾಗಿ ಪ್ರತಿ 10 ತಿಂಗಳಿಗೊಮ್ಮೆ ನಗರಸಭೆ ಅಧ್ಯಕ್ಷರನ್ನು ಬದಲಾಯಿಸಿ ಭ್ರಷ್ಟಾಚಾರ ನಡೆಸಿದರು. ಇದರಿಂದ ಅವಳಿ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಕುಡಿಯುವ ನೀರು ಯೋಜನೆಯಡಿ ಇಲ್ಲಿಯವರೆಗೆ ಅವಳಿ ನಗರದ ಎಷ್ಟು ಮನೆಗಳಿಗೆ ಪೈಪ್‌ಲೈನ್ ಅವಳವಡಿಸಲಾಗಿದೆ ಎಂಬುವುದು ಅಧಿಕಾರಿಗಳಿಗೆ ಸ್ಪಷ್ಟತೆ ಇಲ್ಲ.

ನಗರದೆಲ್ಲೆಡೆ ಅವೈಜ್ಞಾನಿಕವಾಗಿ ಯುಜಿಡಿ, ಕುಡಿಯುವ ನೀರು ಯೋಜನೆಯ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ರಸ್ತೆಗಳು ಹಾಳಾಗಿವೆ. ಸುಮಾರು 150 ಕೋಟಿ ರೂ. ಯುಜಿಡಿ ಕಾಮಗಾರಿಗೆ ನೀಡಲಾಗಿದೆ. ಆದರೆ, ಯುಜಿಡಿ ಕಾಮಗಾರಿಯ ಪರಿಸ್ಥಿತಿ ಏನಾಗಿದೆ ಎಂಬುವುದು ಜನರಿಗೆ ಗೊತ್ತಿದೆ’ ಎಂದು ಅನಿಲ್ ಮೆಣಸಿನಕಾಯಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ, ಸಂಗಮೇಶ್ ದುಂದೂರ, ಎಂ.ಎಸ್.ಕರೀಗೌಡ್ರ, 35ನೇ ವಾರ್ಡ್ ಅಭ್ಯರ್ಥಿ ಉಷಾ ದಾಸರ, ಮಹೇಶ್ ದಾಸರ, ಪ್ರಶಾಂತ್ ನಾಯ್ಕರ, ಸಿದ್ದು ಪಲ್ಲೇದ, ಪರಮೇಶ್ ನಾಯಕ್, ಜಯಣ್ಣ ಶೆಟ್ಟರ್, ಕೆ ಕೆ ಮಳಗೌಡರ, ಮೋಹನ ಮಾಳಗಿಮನಿ, ಬಸವರಾಜ್ ಗಡ್ಡೆಪ್ಪನವರ್, ಪ್ರಕಾಶ್ ಕೋಟಿ, ರಾಹುಲ್ ಸುಗಂಧಿ, ಮಲ್ಲಿಕಾರ್ಜುನಗೌಡ ಹೊಳೆಯಣ್ಣವರ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!