HomeCrime Newsಭೀಕರ ಅಪಘಾತ; ಸ್ಥಳದಲ್ಲಿಯೇ ತಂದೆ, ಮಗಳ ಸಾವು, ಇಬ್ಬರಿಗೆ ಗಾಯ

ಭೀಕರ ಅಪಘಾತ; ಸ್ಥಳದಲ್ಲಿಯೇ ತಂದೆ, ಮಗಳ ಸಾವು, ಇಬ್ಬರಿಗೆ ಗಾಯ

For Dai;y Updates Join Our whatsapp Group

Spread the love

ಕೊಪ್ಪಳದ ಜಾತ್ರೆ ಮುಗಿಸಿ ಕಣಗಿನಹಾಳಕ್ಕೆ ಹೊರಟಿದ್ದ ಮೃತರು….

ವಿಜಯಸಾಕ್ಷಿ ಸುದ್ದಿ, ಗದಗ

ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ ಇಬ್ಬರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ರಾತ್ರಿ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ಜರುಗಿದೆ.

ಮೃತರನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಅಲ್ಲಾಸಾಬ್ ನದಾಫ್ (60) ಹಾಗೂ ರಮಜಾನ ಬೇಗಂ(22) ಎಂದು ಗುರುತಿಸಲಾಗಿದೆ.

ಮೃತರು ಒಂದೇ ಬೈಕ್ ನಲ್ಲಿದ್ದರು. ಗಾಯಗೊಂಡ ಲಲಿತಾ ಹಂಚಿನಾಳ ಹಾಗೂ ಅಪ್ಪಣ್ಣ ಹಿರೇಮಠ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತ ಅಲ್ಲಾಸಾಬ ತನ್ನ ಸಣ್ಣ ಮಗಳಾದ ರಮಜಾನಬಿ ಅವಳನ್ನು ಕರೆದುಕೊಂಡು ಗದಗ ತಾಲೂಕಿನ ಕಣಗಿನಹಾಳ ಗ್ರಾಮದ ಮತ್ತೊಬ್ಬ ಮಗಳ ಮನೆಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಕೊಪ್ಪಳದಿಂದ ಗದಗ ಕಡೆ ಬರುತ್ತಿತ್ತು ಎನ್ನಲಾಗಿದ್ದು, ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸುದ್ದಿ ತಿಳಿದು ಮುಂಡರಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!