HomeGadag Newsಕಡಿಮೆ ಅವಧಿಯಲ್ಲೇ ಅಧಿಕ ಅಭಿವೃದ್ಧಿ; ಶಿವಯೋಗಿ ಶ್ರೀಗಳ ಪ್ರಶಂಸೆ

ಕಡಿಮೆ ಅವಧಿಯಲ್ಲೇ ಅಧಿಕ ಅಭಿವೃದ್ಧಿ; ಶಿವಯೋಗಿ ಶ್ರೀಗಳ ಪ್ರಶಂಸೆ

For Dai;y Updates Join Our whatsapp Group

Spread the love

ಚಿಕ್ಕನರಗುಂದದಲ್ಲಿ ಉದ್ಯಾನವನ, ಗ್ರಾಮಸಭೆ ಕಟ್ಟೆ ಹಾಗೂ ಪಿಂಕ್ ಶೌಚಾಲಯ ಕಟ್ಟಡ ಉದ್ಘಾಟನೆ….ಗ್ರಾಪಂ ಅಧ್ಯಕ್ಷ ಮುತ್ತು ರಾಯರೆಡ್ಡಿ ಕಾರ್ಯ ವೈಖರಿಗೆ ಶ್ರೀಗಳ, ಗ್ರಾಮಸ್ಥರ ಮೆಚ್ಚುಗೆ

ವಿಜಯಸಾಕ್ಷಿ ಸುದ್ದಿ, ನರಗುಂದ:

‘ಗ್ರಾಪಂ ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ಹಳೆಯ ಕಾಲದ ಗ್ರಾಮೀಣ ಸೊಗಡನ್ನು ಗ್ರಾಮಸಭೆ ಕಟ್ಟೆಯನ್ನಾಗಿಸಿ ವಿಶೇಷ ಚೇತನರಿಗಾಗಿ ಉದ್ಯಾನವನ, ವಿದ್ಯಾರ್ಥಿನಿಯರಿಗಾಗಿ ಪಿಂಕ್ ಶೌಚಾಲಯ ನಿರ್ಮಿಸಲು ಶ್ರಮಿಸಿದ ಗ್ರಾಪಂ ಅಧ್ಯಕ್ಷ ಮುತ್ತು ರಾಯರೆಡ್ಡಿ ಅವರ ಕಾರ್ಯ ಶ್ಲಾಘನೀಯ ಎಂದು ಪತ್ರಿವನಮಠದ ಗುರು ಸಿದ್ದವೀರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.

ಶುಕ್ರವಾರ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿ ಅವರಣದಲ್ಲಿ ನಿರ್ಮಿಸಿರುವ ಉದ್ಯಾನವನ, ಗ್ರಾಮಸಭೆ ಕಟ್ಟೆ ಹಾಗೂ ಪಿಂಕ್ ಶೌಚಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

‘ಗ್ರಾಪಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕಡಿಮೆ ಅವಧಿಯಲ್ಲಿ ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ರಾಯರೆಡ್ಡಿಯವರು ಇನ್ನಿತರರಿಗೆ ಮಾದರಿಯಾಗಿದ್ದಾರೆ. ಅಲ್ಲದೇ, ತಮ್ಮ ಅಭಿವೃದ್ಧಿ ಕಾರ್ಯಗಳ ಮೂಲಕವೇ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದ ಅವರು, ನವಲಗುಂದ ತಾಲೂಕಿನಲ್ಲಿ ಗುಮ್ಮಗೋಳ ಹಾಗೂ ನರಗುಂದ ತಾಲೂಕಿಗೆ ಚಿಕ್ಕನರಗುಂದದ ಗ್ರಾಮ ಪಂಚಾಯತಿಗಳು ಮಾದರಿಯಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಮರಡಿ ಮಠದ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ‘ಜನಪ್ರತಿನಿಧಿಗಳು ಕ್ರಿಯಾಶೀಲವಾಗಿದ್ದರೆ ಗ್ರಾಮದ ಅಭಿವೃದ್ಧಿ ಸಾಧ್ಯ ಎಂಬುದಕ್ಕೆ ಚಿಕ್ಕನರಗುಂದ ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರೆಡ್ಡಿ ಅವರು ತಮ್ಮ ಅಭಿವೃದ್ಧಿ ಕಾರ್ಯಗಳ ಮೂಲಕ ಸಾಬೀತು ಪಡಿಸಿದ್ದಾರೆ. ಅದರಂತೆ, ಇನ್ನಿತರ ಗ್ರಾಪಂ ಸದಸ್ಯರು, ಪಿಡಿಒರವರ ಅಭಿವೃದ್ಧಿಶೀಲ ಚಿಂತನೆಗಳು ಗ್ರಾಮದ ಸುಧಾರಣೆಗೆ ಮುನ್ನುಡಿಯಾಗಿದ್ದು, ಜಿಲ್ಲೆಯಲ್ಲಿಯೇ ಚಿಕ್ಕನರಗುಂದ ಗ್ರಾಮ ನಿದರ್ಶನವಾಗಿದೆ ಎಂದರು.

ಗ್ರಾಪಂ ಅಧ್ಯಕ್ಷ ಮುತ್ತು ರಾಯರೆಡ್ಡಿ ಮಾತನಾಡಿ, ‘ನಮ್ಮ ಗ್ರಾಮದ ಪ್ರಮುಖ ರಸ್ತೆಯೊಂದರ ಬಹುದಿನಗಳ ಸಮಸ್ಯೆ ಬಗೆಹರಿಸುವಲ್ಲಿ ಸಹಕರಿಸಿ ತಾಪಂನಿಂದ ಗ್ರಾಮದ ವಿವಿಧ ಅಭಿವೃದ್ಧಿ ಕಾಮಾಗಾರಿಗಳಿಗಾಗಿ ೧೯ ಲಕ್ಷ ರೂ. ಅನುದಾನ ಒದಗಿಸಿದ ಸಚಿವ ಸಿ.ಸಿ.ಪಾಟೀಲ ಅವರನ್ನು ಅಭಿನಂದಿಸಿದರು. ಗ್ರಾಪಂ ವ್ಯಾಪ್ತಿಯಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕೆಲಸಗಳಾಗಲು ತಾಪಂ ಇಒ, ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಗ್ರಾಮಸ್ಥರ ಸಹಕಾರವೇ ಕಾರಣ ಎಂದು ಹೇಳಿದರು.

ಗ್ರಾಮ ಪಂಚಾಯತಿ ಸದಸ್ಯ ಶರಣಪ್ಪ ಹಳೆಮನಿ ಮಾತನಾಡಿ, ಹತ್ತಾರು ಅಭಿವೃದ್ಧಿ ಕೆಲಸಗಳಿಗೆ ಅಧ್ಯಕ್ಷರ ಉತ್ಸಾಹ, ಸರ್ವ ಸದಸ್ಯರ, ಪಿಡಿಒ ಅವರ ಸಂಪೂರ್ಣ ಬೆಂಬಲ ಕಾರಣ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಲಕ್ಷ್ಮಣ ಕಂಬಳಿ, ಬಾಪು ಹಿರೇಗೌಡ್ರ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರಮ್ಮ ಮುದಿಗೌಡ್ರ, ಶೃತಿ ಬ್ಯಾಳಿ, ಶೋಭಾ ಕೋಣನ್ನವರ, ನಿರ್ಮಲಾ ತಳವಾರ, ಗ್ರಾಮದ ಹಿರಿಯರಾದ ಶಂಕ್ರಪ್ಪ ಯರಗಟ್ಟಿ, ರುದ್ರಗೌಡ ರಾಚನಗೌಡ್ರ, ಸಂಗಪ್ಪ ಬಾಚಿ, ಹನಮಂತ ಚಾವಡಿ, ಶ್ರೀನಿವಾಸ್ ರಾಯರೆಡ್ಡಿ, ಪಡಿಯಪ್ಪ ಮರಿಯಣ್ಣವರ, ಮಲ್ಲನಗೌಡ ಸರ್ವಮಾನೇದ, ಮಲ್ಲಿಕಾರ್ಜುನ ಸಾತನ್ನವರ, ಶಂಕರಗೌಡ ಚನ್ನಪ್ಪಗೌಡ್ರ, ಬಸನಗೌಡ ಮುದಿಗೌಡ್ರ, ಪಿಡಿಒ ಶೈನಾಜ್ ಮುಜಾವರ್ ಸೇರಿದಂತೆ ಇನ್ನಿತರರು ಇದ್ದರು.

ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ತಮ್ಮ ಮೂರು ತಿಂಗಳ ಗೌರವಧನದಲ್ಲಿ ಗ್ರಾಮದಲ್ಲಿರುವ ವಿಶೇಷ ಚೇತನರನ್ನು ಗುರುತಿಸಿ ಅವರಿಗೆ ಉದ್ಯಾನವನ ನಿರ್ಮಿಸಿರುವುದು ರಾಜ್ಯದಲ್ಲಿಯೇ ಮಾದರಿ ಕಾರ್ಯವಾಗಿದೆ.

ಬಸವರಾಜ್ ಹೊಂಗಲ್, ಗ್ರಾಪಂ ಮಾಜಿ ಉಪಾಧ್ಯಕ್ಷ

ಚಿಕ್ಕನರಗುಂದ ಗ್ರಾಮದಲ್ಲಿ ನಿರ್ಮಿಸಲಾಗಿರುವ ಗ್ರಾಮ ಸಭಾಕಟ್ಟೆ ನಮ್ಮ ಮುಂದಿನ ಪೀಳಿಗೆಗೆ ಒಂದು ಪಳಿಯುಳಿಕೆಯಾಗಿ ಉಳಿಯುವಂತಾಗಿದೆ.

ಶ್ರೀನಿವಾಸ ರಾಯರೆಡ್ಡಿ, ಗ್ರಾಮಸ್ಥ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!