ಕಾಂಗ್ರೆಸ್ ಮುಖಂಡನ ದಾಭಾಕ್ಕೆ ಬಂದ ನಾಗರಾಜ ಮರಳಿ ಗೂಡಿಗೆ

0
Spread the love

ಆರು ಅಡಿ ಉದ್ದದ ನಾಗರಹಾವು; ಸ್ನೇಕ್ ಬುಡ್ಡಾರಿಂದ ರಕ್ಷಣೆ

Advertisement

ವಿಜಯಸಾಕ್ಷಿ ಸುದ್ದಿ, ನರಗುಂದ

ಇಲ್ಲಿನ ಹುಬ್ಬಳ್ಳಿ ರಸ್ತೆಗೆ ಹೊಂದಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜು ಕಲಾಲ ಎಂಬುವರಿಗೆ ಸೇರಿದ ಸಂಜು ದಾಭಾದಲ್ಲಿ ಭಾರೀ ಗಾತ್ರದ ನಾಗರಹಾವೊಂದು ಪ್ರತ್ಯಕ್ಷವಾಗಿ ಕೆಲಕಾಲ ಆತಂಕ ಸೃಷ್ಟಿಸಿತು.

ಸುಮಾರು ಆರು ಅಡಿ ಉದ್ದವಿರುವ ಈ ನಾಗರಹಾವು ದಾಭಾದ ಆವರಣದಲ್ಲಿ ಸಂಗ್ರಹಿಸಿದ್ದ ಪಾಳು ಸರಕುಗಳ ಸಂದುಗಳಲ್ಲಿ ನುಗ್ಗಿ ಮರೆಯಾಗುತ್ತಿತ್ತು.

ಸದಾಕಾಲ ಉರಗಗಳ ರಕ್ಷಣೆಗೆಂದೇ ಸಿದ್ಧವಾಗಿದ್ದು, ಯಾವುದೇ ಭಾಗದಿಂದ ಕರೆಬಂದರೂ ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸುವ ಬುಡ್ಡೇಸಾಬ್ ಅಲಿಯಾಸ್ ಸ್ನೇಕ್ ಬುಡ್ಡಾರನ್ನು ಸ್ಥಳಕ್ಕೆ ಕರೆಯಿಸಿದಾಗ, ಅವರೂ ಕೂಡ ಈ ನಾಗರವನ್ನು ಸೆರೆಹಿಡಿಯುವಲ್ಲಿ ಹರಸಾಹಸ ಪಡಬೇಕಾಯಿತು.

ಮುಂಗುಸಿಗಳೊಂದಿಗೆ ಸೆಣಸಾಡಿ ಈಗಾಗಲೇ ತಲೆ, ಹೆಡೆಯ ಭಾಗದಲ್ಲಿ ಗಾಯಗೊಂಡಂತಿದ್ದ ನಾಗರಾಜನ ರೋಷಾವೇಷವೂ ಅಷ್ಟೇ ಇತ್ತು. ಸ್ಥಳೀಯರ ಸಹಕಾರದಲ್ಲಿ ಹಾವನ್ನು ಹಿಡಿದಾಗ ಸಿಟ್ಟಿನಿಂದ ಹೆಡೆಯೆತ್ತಿ ಭುಸ್ಸೆನ್ನುತ್ತ ಎರಡು-ಮೂರು ಅಡಿ ಎತ್ತರಕ್ಕೆ ಹೆಡೆಯೆತ್ತಿ ನಿಲ್ಲುತ್ತಿತ್ತು.

ಇದೇ ಕಾರ್ಯದಲ್ಲಿ ಪರಿಣಿತರಾಗಿರುವ ಸ್ನೇಕ್ ಬುಡ್ಡಾ ಉರಗವನ್ನು ಸುರಕ್ಷಿತವಾಗಿ ಹಿಡಿದು ಮುಚ್ಚಳವಿರುವ ಕ್ಯಾನ್‌ನಲ್ಲಿ ತುಂಬಿ ಸೂಕ್ತ ಸ್ಥಳದಲ್ಲಿ ಬಿಟ್ಟುಬಂದಾಗ ಸ್ಥಳೀಯರು ನಿಟ್ಟುಸಿರಾದರು.


Spread the love

LEAVE A REPLY

Please enter your comment!
Please enter your name here