ವಿಜಯಸಾಕ್ಷಿ ಸುದ್ದಿ, ಗದಗ:
ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮೊನ್ನೆ ಎರಡು ಗುಂಪಗಳ ಮಧ್ಯೆ ನಡೆದ ಗಲಾಟೆಯ ಪರಿಣಾಮವಾಗಿ, ಒಂದು ಕೋಮಿನ ಯುವಕರು ಮಾರಕಾಸ್ತ್ರ ಬಳಸಿ ಹಲ್ಲೆ ನಡೆಸಿದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.
ಸೋಮವಾರ ರಾತ್ರಿ ಇಬ್ಬರು ಯುವಕರು, 19ವರ್ಷದ ಯುವಕ ಶಮೀರ್ ಶಹಪೂರ್ ಎಂಬಾತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸಿ.ಸಿ. ಟಿವಿಯಲ್ಲಿ ಸೆರೆಯಾಗಿವೆ.
ನರಗುಂದ ಪುರಸಭೆಯ ಬಳಿ ಇಬ್ಬರು ಯುವಕರು ಸೇರಿ ಶಮೀರ್ ಎಂಬಾತನನ್ನು ಅಟ್ಟಾಡಿಸಿಕೊಂಡು ಹೊಡೆಯುತ್ತಿರುವ ಭಯಾನಕ ದೃಶ್ಯಗಳು ಬೆಚ್ಚಿ ಬೀಳಿಸುವಂತಿವೆ. ಸಿ.ಸಿ.ಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಂಚಲನ ಸೃಷ್ಟಿಸಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಶಮೀರ್ ಶಹಪೂರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರವೀಣ ಹಾಗೂ ಮಲ್ಲಿಕಾರ್ಜುನ ಹಿರೇಮಠ ಎಂಬ ಇಬ್ಬರು ಯುವಕರ ವಿರುದ್ಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.