ವಿಜಯಸಾಕ್ಷಿ ಸುದ್ದಿ, ನರೇಗಲ್
Advertisement
ಜಾನುವಾರಿಗೆ ನೀರು ಕುಡಿಸಲೆಂದು ಹೋದ ಬಾಲಕನೊಬ್ಬ ಕಲ್ಲಿನ ಕ್ವಾರಿಯೊಳಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ತೋಟಗಂಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸುಮೀತ್(10 ವರ್ಷ) ಎಂಬುವನೇ ಮೃತ ಬಾಲಕನಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಗ್ರಾಮಸ್ಥರ ನೆರವಿನಿಂದ ಬಾಲಕನ ಮೃತ ದೇಹವನ್ನು ಕಲ್ಲಿನ ಕ್ವಾರಿಯಿಂದ ಹೊರತೆಗೆದಿದ್ದಾರೆ.
ನರೇಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.