ಪ್ರೀತಿಸಿದ ಯುವಕನೊಂದಿಗೆ ಮಗಳು ಪರಾರಿ; ನೊಂದ ಅಂಗನವಾಡಿ ಶಿಕ್ಷಕಿ ಆತ್ಮಹತ್ಯೆಗೆ ಶರಣು…..

0
Spread the love

ಸ್ಟೇರ್ ಕೇಸ್ ಮೆಟ್ಟಿಲುಗಳ ಪೈಪ್ ಗೆ ಸೀರೆಕಟ್ಟಿ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ತಾಯಿ…..

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಪ್ರೀತಿಯಿಂದ ಸಾಕಿದ್ದ ಮಗಳು, ಅದೇ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಹೋಗಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ನೊಂದಿದ್ದ ತಾಯಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬುಧವಾರ ಜರುಗಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹದ್ಲಿ ರಸ್ತೆಯ ಬರೋಡ ಬ್ಯಾಂಕ್ ಬಳಿಯ ನಿವಾಸಿ, ಅಂಗನವಾಡಿ ಶಿಕ್ಷಕಿಯಾಗಿದ್ದ ಸುನೀತಾ ಕೋ ವೀರಣ್ಣ ನಾಯಕವಾಡಿ (48) ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.

ಕಳೆದ ನಾಲ್ಕು ತಿಂಗಳ ಹಿಂದೆ ಮಗಳು ಅದೇ ಏರಿಯಾದ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದಳು.

ಮಗಳು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಹೋಗಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿ ಸುನೀತಾ ತನ್ನ ಸಹೋದರಿಯ ಮನೆ ಮುಂದಿರುವ (ಸ್ಟೇರ್ ಕೇಸ್) ಮಾಳಿಗೆ ಹತ್ತುವು ಮೆಟ್ಟಿಲುಗಳ ಪೈಪ್ ಗೆ ಸೀರೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸುದ್ದಿ ತಿಳಿದು ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನರಗುಂದ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here