ವಿಜಯಸಾಕ್ಷಿ ಸುದ್ದಿ, ನವಲಗುಂದ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ “ಕನ್ನಡ ಪತ್ರಿಕೆ ಓದಿ – ಪತ್ರಿಕೋಧ್ಯಮ ಉಳಿಸಿ” ಸಂವಾದ ಕಾರ್ಯಕ್ರಮವನ್ನು ಡಿ.7 ರಂದು ಬೆಳಿಗ್ಗೆ 10.30 ಕ್ಕೆ ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಎನ್.ಗಡ್ಡಿ, ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ಜೆಡಿಎಸ್ ಮುಖಂಡ ಶ್ರೀಶೈಲ ಮೂಲಿಮನಿ, ತಹಶೀಲ್ದಾರ್ ಅನೀಲ ಬಡಿಗೇರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಎಂ.ಬಿ.ಬಾಗಡಿ ಆಗಮಿಸಲಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ರೈತ ಭವನದ ಎದುರುಗಡೆ “ ಕನ್ನಡ ಪತ್ರಿಕೆಗಳನ್ನು ಓದಿ ಪತ್ರಿಕೋಧ್ಯಮ ಉಳಿಸಿ” ಪದವಿ ವಿದ್ಯಾರ್ಥಿಗಳ ಜಾಥಾಕ್ಕೆ ಮಾಜಿ ಸಚಿವ ಕೆ.ಎನ್.ಗಡ್ಡಿ ಚಾಲನೆ ನೀಡಲಿದ್ದಾರೆ.
ಅಷ್ಟೇ ಅಲ್ಲದೇ ಕಾ.ನಿ.ಪ.ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅವರು ಬೆಳಿಗ್ಗೆ 8 ಗಂಟೆಯಿಂದ 9 ಗಂಟೆಯ ಒಳಗಾಗಿ, ಇಲ್ಲಿಯ ಇತಿಹಾಸ ಪ್ರಸಿದ್ದ ನಾಗಲಿಂಗ ಸ್ವಾಮಿ ಮಠ, ಗವಿಮಠ, ಪಂಚಗೃಹ ಹಿರೇಮಠ ಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನಾಶೀರ್ವಾದ ಪಡೆದು, ನಂತರ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ, ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಜೋಡಣೆಗಾಗಿ ನಿರಂತರ ಹೋರಾಟ ಮಾಡುತ್ತಿರುವ ರೈತ ಮುಖಂಡರೊಂದಿಗೆ ಚರ್ಚಿಸಲಿದ್ದಾರೆಂದು ತಾಲ್ಲೂಕಾ ಅಧ್ಯಕ್ಷ ಚರಂತಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.