ಜೆಡಿಎಸ್ ಅಧ್ಯಕ್ಷರಾಗಿ ಶ್ರೀಶೈಲ ಮೂಲಿಮನಿ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ನವಲಗುಂದ

Advertisement

ಸ್ಥಳೀಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಧ್ಯಕ್ಷರನ್ನಾಗಿ ತಾಲ್ಲೂಕಿನ ಶಲವಡಿ ಗ್ರಾಮದ ಶ್ರೀಶೈಲ ಮೂಲಿಮನಿ ಅವರನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಅವರ ಸೂಚನೆಯ ಮೆರೆಗೆ ಆಯ್ಕೆ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾಧ್ಯಕ್ಷ ಬಿ.ಬಿ.ಗಂಗಾಧರಮಠ ಆದೇಶಿಸಿದ್ದಾರೆ.

ನೂತನ ಜವಾಬ್ದಾರಿ ವಹಿಸಿಕೊಂಡಿರುವ ಶ್ರೀಶೈಲ ಮೂಲಿಮನಿ ಅವರು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷದ ಬಲವರ್ಧನೆ ಮಾಡುವುದರ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷದ ಅವಶ್ಯಕತೆ ಮತ್ತು  ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಯನ್ನು ಮನೆ ಮನೆಗೆ ತಲುಪಿಸಿ  ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಕಲ್ಪ ಮಾಡುವಂತೆ ಬಿ.ಬಿ.ಗಂಗಾಧರಮಠ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here