ವಿಜಯಸಾಕ್ಷಿ ಸುದ್ದಿ, ಗದಗ
Advertisement
ಮುಂದೊಂದು ದಿನ ಉತ್ತರ ಕರ್ನಾಟಕ ಬೇರೆ ಆಗೇ ಆಗುತ್ತೆ….ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ತುಂಬಾ ನೆಗ್ಲೆಟ್ ಆಗಿದೆ. ಹೀಗೆ ಹೇಳಿದವರು ಶಿರಹಟ್ಟಿಯ ಬಿಜೆಪಿ ಶಾಸಕರಾದ ಡಾ.ಚಂದ್ರು ಲಮಾಣಿ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಸರಕಾರಿ ಕಾಲೇಜಿನಲ್ಲಿ ನಡೆದ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದು, ಆ ವಿಡಿಯೋ ಇದೀಗ ವೈರಲ್ ಆಗಿದೆ.
ದಿ. ಉಮೇಶ್ ಕತ್ತಿ ಅವರ ನಂತರ ಮತ್ತೊಬ್ಬ ಶಾಸಕರು ಈ ರೀತಿ ಬಹಿರಂಗ ಹೇಳಿಕೆ ನೀಡಿದ್ದಾರೆ.
ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕ ಬಹಳ ನೆಗ್ಲೆಟ್ ಆಗಿದೆ. ಉತ್ತರ ಕರ್ನಾಟಕದಿಂದ ಹೆಚ್ಚು ಶಾಸಕರು ಆಯ್ಕೆಯಾಗಿದ್ದಾರೆ. ಆದರೂ ಉತ್ತರ ಕರ್ನಾಟಕ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ತಮ್ಮ ಡಾ. ಚಂದ್ರು ಲಮಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೀಗ ಶಾಸಕರ ಹೇಳಿಕೆ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.