20.9 C
Gadag
Monday, October 2, 2023

ಪ್ರಚಾರದ ಉದ್ದೇಶದಿಂದ ಜನತಾ ಸದನ ಆಯೋಜನೆ; ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ತಿರುಗೇಟು….

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಬಿಜೆಪಿ ಆಡಳಿತ ಇರುವ ನಗರಸಭೆಯಲ್ಲಿ ಜನರು ತಮ್ಮ ಕೆಲಸಕ್ಕಾಗಿ ಅಲೆದಾಡುವಂತಾಗಿದೆ. ಇಂಥ ಸಮಯದಲ್ಲಿ, ಈ ಹಿಂದೆ ತಮ್ಮ ಆಡಳಿತವಿದ್ದಾಗ ಜಿಲ್ಲೆಯಲ್ಲಿ ಸೂಕ್ತವಾದ ಅಭಿವೃದ್ಧಿ ಕೈಗೊಳ್ಳದೇ ಅನ್ಯಾಯ ಮಾಡಿ, ಈಗ ಕೇವಲ ಪ್ರಚಾರ ಗಿಟ್ಟಿಸುವ ಉದ್ದೇಶದಿಂದ ಜನತಾ ಸದನ ಆಯೋಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಕೊಪ್ಪಳ ವ್ಯಂಗ್ಯವಡಿದ್ದಾರೆ.

ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತಗಾರರಾದ ಎಚ್ ಕೆ ಪಾಟೀಲರು ಸಚಿವರಾಗಿದ್ದು, ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ.

ಜಿಲ್ಲೆಯಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಎಚ್ ಕೆ ಪಾಟೀಲರ ನೇತೃತ್ವದಲ್ಲಿ ನೀಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ೫ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 [email protected]

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!