ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ನೇ ಸಾಲಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ಅಜಾಗರೂಕತೆಯಿಂದ ಮೊಬೈಲ್ ಫೋನ್ಗಳನ್ನು ಕಳೆದುಕೊಂಡಿದ್ದ ವಿಷಯಕ್ಕೆ ಸಂಬಂಧಿಸಿ, ಸಿಆರ್ಪಿಸಿ ಕಲಂ 155 ರಂತೆ ಹಲವು ಪ್ರಕರಣಗಳು ದಾಖಲಾಗಿದ್ದವು.

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಹಾಗೂ ಗದಗ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಶಿವಾನಂದ ಪವಾಡಶೆಟ್ಟರ ಅವರ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಜಯಂತ ಗೌಳಿ ಹಾಗೂ ಸಿಬ್ಬಂದಿಗಳಾದ ಗುರುರಾಜ ಬೂದಿಹಾಳ, ಯು.ಎಫ್. ಸುಣಗಾರ, ಕೆ.ಡಿ. ಜಮಾದಾರ, ಪಿ.ಎಸ್. ಕಲ್ಲೂರ, ಪಿ.ಎ. ಭರಮಗೌಡ್ರ ಸೇರಿ ಸಾರ್ವಜನಿಕರು ಕಳೆದುಕೊಂಡ ವಿವಿಧ ಕಂಪನಿಗಳ ಸುಮಾರು 2.50 ಲಕ್ಷ ರೂ. ಬೆಲೆಬಾಳುವ ಒಟ್ಟೂ 22ಮೊಬೈಲ್ ಫೋನ್ಗಳನ್ನು ಸಾರ್ವಜನಿಕರಿಗೆ ಹಿಂದಿರುಗಿಸಿದ್ದಾರೆ.
ಮೊಬೈಲ್ ಪತ್ತೆ ಕಾರ್ಯದಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಗದಗ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಪ್ರಶಂಸಿಸಿದ್ದಾರೆ.