ಎಸ್ಪಿ ನೇಮಗೌಡ ನೇತೃತ್ವದಲ್ಲಿ ಕಾರ್ಯಾಚರಣೆ………
ವಿಜಯಸಾಕ್ಷಿ ಸುದ್ದಿ, ಗದಗ
ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಗೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸರು ಗದಗನ ಸಬ್ ಜೈಲ್ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಅಕ್ರಮ ಚಟುವಟಿಕೆಗಳ ನಿಯಂತ್ರಣದ ಅಡಿಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಸುಮಾರು ಒಂದು ಗಂಟೆಗಳ ಕಾಲ ಕಾರಾಗೃಹದಲ್ಲಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿ ಕೈದಿಗಳನ್ನು ಹಾಗೂ ವಿಚಾರಣಾಧೀನ ಕೈದಿಗಳನ್ನು ಹಾಗೂ ಅವರು ವಾಸಿಸುವ ಕೊಠಡಿಗಳನ್ನು ಪರಿಶೀಲನೆ ನಡೆಸಲಾಯಿತು. ಮೊಬೈಲ್ ಬಳಿಕೆ, ಧೂಮಪಾನ ಸೇರಿದಂತೆ ಖೈದಿಗಳ ಚಟುವಟಿಕೆಗಳನ್ನು ಪರಿಶೀಲಿಸಲಾಯಿತು.

ಗದಗ ಎಸ್ಪಿ ಬಿ.ಎಸ್ ನೇಮಗೌಡ ಹಾಗೂ ಡಿವೈಎಸ್ಪಿಗಳಾದ ಮಡಿವಾಳಪ್ಪ ಸಂಕದ, ವಾಯ್ ಎಸ್ ಏಗನಗೌಡರ್, ಗದಗ, ಬೆಟಗೇರಿ ಠಾಣೆಗಳ ಸಿಪಿಐ, ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿದ್ದರು.