ಜೀವನದಲ್ಲಿ ಜಿಗುಪ್ಸೆ; ರೈಲ್ವೆ ಹಳಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

0
Spread the love

ರುಂಡ-ಮುಂಡ ಇಬ್ಬಾಗ…….

Advertisement

ಕೊಟ್ಟೂರು : ಅನಾರೋಗ್ಯದಿಂದ ಜಿಗುಪ್ಸೆಗೊಂಡ ಯುವಕನೋರ್ವ ರೈಲ್ವೆ ಹಳಿಗೆ ಬಿದ್ದು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಪಟ್ಟಣದ ಸಮೀಪದಲ್ಲಿ ನಡೆದಿದೆ.

ಮೃತನನ್ನು ಪಟ್ಟಣದ ಜುಮ್ಮಾ ಮಸೀದಿ ಹತ್ತಿರದ ನಿವಾಸಿ ರಾಜಶೇಖರ್ ಅವರ ಪುತ್ರ ಅಜ್ಜಯ್ಯ (25) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.

ಗುರುವಾರ ರಾತ್ರಿ ರೈಲಿನ ಹಳಿ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸ್ ಅಧಿಕಾರಿ ಗುರುರಾಜ್ ಭೇಟಿ ನೀಡಿ ಪರಿಶೀಲಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಕುರಿತು ಮಾಹಿತಿ ಪಡೆದುಕೊಂಡರು.

ಪಟ್ಟಣ ಪಂಚಾಯತಿ ಸದಸ್ಯ ಕೆಂಗರಾಜ್ ಸೇರಿದಂತೆ ಪ್ರಮುಖ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಯಿತು.


Spread the love

LEAVE A REPLY

Please enter your comment!
Please enter your name here