ಗದಗ ರೈಲು ಕ್ಷೇತ್ರಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಪ್ಟ್; ಗದಗ-ಯಲವಗಿ ರೈಲು ಮಾರ್ಗ ಜಾರಿಗೆ ಪ್ರಸ್ತಾವನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:

Advertisement

ಜಿಲ್ಲೆಯ ಜನರ ಬಹದಿನಗಳ ಬೇಡಿಕೆಯಾಗಿದ್ದ ನೂತನ ಗದಗ-ಯಲವಗಿ, ಗದಗ-ವಾಡಿ ರೈಲು ಮಾರ್ಗಗಳ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ. ಶುಕ್ರವಾರ ಬಸವರಾಜ್ ಬೊಮ್ಮಾಯಿ ಅವರು 2022-23ನೇ ಸಾಲಿನ ತಮ್ಮ ಚೊಚ್ಚಲ ಬಜೆಟ್‌ನಲ್ಲಿ 55 ಕಿ.ಮೀ.ಉದ್ದದ ಗದಗ-ಯಲವಗಿ ರೈಲು ಮಾರ್ಗದ ಭೂಸ್ವಾಧೀನ ವೆಚ್ಚ ಭರಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಹಾಗೂ ಗದಗ-ವಾಡಿ ರೈಲು ಅನುಷ್ಠಾನಗೊಳಿಸುವುದಾಗಿ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ರೈಲ್ವೆ ಸಾಂದ್ರತೆ ಹೆಚ್ಚಿಸುವ ಮೂಲಕ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರ ನಿರ್ಧರಿಸಿದ್ದು, ರೈಲ್ವೆ ಇಲಾಖೆಯೊಂದಿಗೆ 50:50 ವೆಚ್ಚ ಹಂಚಿಕೆಯಲ್ಲಿ ಒಂಬತ್ತು ನೂತನ ರೈಲ್ವೆ ಮಾರ್ಗ ಅನುಷ್ಠಾನಗೊಳಿಸುತ್ತಿದೆ. ಗಿಣಿಗೇರಾ-ರಾಯಚೂರು, ತುಮಕೂರು-ರಾಯದುರ್ಗ, ಗದಗ-ವಾಡಿ, ಕುಡಚಿ-ಬಾಗಲಕೋಟೆ, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು, ತುಮಕೂರು-ಚಿತ್ರದುರ್ಗ-ದಾವಣಗೆರೆ, ಚಿಕ್ಕಮಗಳೂರು-ಬೇಲೂರು ಹಾಗೂ ಬೇಲೂರು-ಹಾಸನ ರೈಲು ಮಾರ್ಗಗಳಿಗೆ ಹಸಿರು ನಿಶಾನೆ ತೋರಿದ್ದಾರೆ.

ಅದರಂತೆ, 55 ಕಿ.ಮೀ.ಉದ್ದ ಗದಗ-ಯಲವಗಿ ನೂತನ ರೈಲು ಮಾರ್ಗ ಯೋಜನೆಯನ್ನು 640 ಕೋಟಿ ರೂ. ಅಂದಾಜು ವೆಚ್ಚದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಭೂಸ್ವಾಧೀನ ವೆಚ್ಚ ಭರಿಸಿ ಕೇಂದ್ರದ ಪಾಲಿನೊಂದಿಗೆ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮಸ್ಕಿ, ಸಿಂಧನೂರು, ಗದಗ ಮತ್ತು ಯಾದಗಿರಿ ನಗರಗಳಿಗೆ ಬೈಪಾಸ್ ರಸ್ತೆ ನಿಮಿಸಲಾಗುವುದು. ಈ ಯೋಜನೆಗೆ ಅವಶ್ಯಕವಿರುವ ಭೂಸ್ವಾಧೀನ ವೆಚ್ಚದಲ್ಲಿ ರಾಜ್ಯ ಸರ್ಕಾರದ ಪಾಲು ಭರಿಸಲು ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು.


Spread the love

LEAVE A REPLY

Please enter your comment!
Please enter your name here