ಹದಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡಿಸುವಂತೆ ಜಿಲ್ಲಾಡಳಿತಕ್ಕೆ ಎಚ್.ಕೆ. ಪಾಟೀಲ ಪತ್ರ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement


ಗದಗ-ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ವಿಪರೀತ ಹದಗೆಟ್ಟಿದ್ದು, ಇದರಿಂದ ಸಾರ್ವಜನಿಕರಿಗೆ ಸಂಚಾರ ತ್ರಾಸದಾಯಕವಾಗುತ್ತಿದೆ. ಶೀಘ್ರವಾಗಿ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಎಂದು ಗದಗ ಮತಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲರು ಕೋರಿದ್ದಾರೆ.

ಈ ಕುರಿತು ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಶಾಸಕರು, ಹದಗೆಟ್ಟಿರುವ ರಸ್ತೆಗಳಿಂದಾಗಿ ಸಾರ್ವಜನಿಕರು ಎಲ್ಲಿ, ಯಾವ ರೀತಿಯಲ್ಲಿ ಅಪಘಾತಗಳಾಗುತ್ತವೆಯೋ ಎಂಬ ಭಯದಿಂದಲೇ ರಸ್ತೆಗಿಳಿಯುವಂತಾಗಿದೆ. ಕೆಲವೆಡೆ ಸಂಚಾರವೇ ದುಸ್ತರವಾಗಿದೆ.

ಯುದ್ಧೋಪಾದಿಯಲ್ಲಿ ಅವಳಿ ನಗರದ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಿ ಸಂಚಾರಿಗಳಿಗೆ, ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪತ್ರಮುಖೇನ ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here