ವಿಜಯಸಾಕ್ಷಿ ಸುದ್ದಿ, ನರೇಗಲ್/ರೋಣ
ಸಾಮಾಜಿಕ ಸ್ವಾಸ್ಥ್ಯವನ್ನು ಕದಡುವ ಉದ್ದೇಶದಿಂದ ತನ್ನ ವಾಟ್ಸಪ್ ಸ್ಟೇಟಸ್ನಲ್ಲಿ ಅಶ್ಲೀಲ ಫೋಟೋ ಹಾಕಿ ವಿಕೃತಿ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ನ.13ರಂದು ಪ್ರಕರಣ ದಾಖಲಾಗಿದೆ.
ಸದರಿ ಪ್ರಕರಣದಲ್ಲಿ ಗಜೇಂದ್ರಗಡ ತಾಲೂಕಿನ ನಿಡಗುಂದಿಯ ದರ್ಶನ್ ಡುಮ್ಮನವರ್ ಎಂಬ ಆರೋಪಿತ ನ.11ರಂದು ಬೆಳಿಗ್ಗೆ 8.53ಕ್ಕೆ ತನ್ನ ಮೊಬೈಲಿನ ವಾಟ್ಸಪ್ ಸ್ಟೇಟಸ್ನಲ್ಲಿ `ಹಳೇ ನೆನಪು-ನಮ್ಮ ಕ್ಷೇತ್ರದ ಬಿಜೆಪಿ ಶಾಸಕನ ಫೋಟೋ’ ಎಂಬ ಅಡಿಬರಹ ಬರೆದು, ಅಶ್ಲೀಲ ಫೋಟೋವನ್ನು ಅಪ್ಲೋಡ್ ಮಾಡಿದ್ದ.
ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡುವ ಉದ್ದೇಶದಿಂದ ಹೀಗೆ ಅಶ್ಲೀಲ ಚಿತ್ರವನ್ನು ಪ್ರಸಾರ ಮಾಡಿದ್ದಾರೆ ಎಂದು ಹಿರೇಬಝಾರದ ಅಶೋಕ್ ಹನಮಂತಪ್ಪ ವನ್ನಾಲ್ ಎಂಬುವವರು ನರೇಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಐ.ಟಿ ಕಾಯ್ದೆ-2008ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ನರೇಗಲ್ ಪೊಲೀಸರು ದರ್ಶನ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ರೋಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಪುರಸಭೆ ಸದಸ್ಯ ಮಿಥುನ್ ಪಾಟೀಲ್ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, ಗಜೇಂದ್ರಗಡದ ಬಿಜೆಪಿ ಕಾರ್ಯಕರ್ತನೊಬ್ಬ ಮಾಜಿ ಶಾಸಕ ಜಿ ಎಸ್ ಪಾಟೀಲರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದನ್ನು ಇದೇ ಸಂದರ್ಭದಲ್ಲಿ ಖಂಡಿಸಿದರು. ರೋಣ ತಾಲೂಕಿನಲ್ಲಿ ಬಿಜೆಪಿಗೊಂದು ಕಾಂಗ್ರೆಸ್ ಪಕ್ಷಕ್ಕೆ ಒಂದು ನ್ಯಾಯ ಎಂದು ಆರೋಪಿಸಿದರು.