ಅದು ವಿಜಯ ಸಂಕಲ್ಪ ಯಾತ್ರೆ ಅಲ್ಲ, ಬಿಜೆಪಿಯ ಸೋಲಿನ ಯಾತ್ರೆ; ಸೈಯದ್ ಖಾಲಿದ್ ವ್ಯಂಗ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಗದಗ ಜಿಲ್ಲೆಗೆ ಸರಿಯಾದ ಜಿಲ್ಲಾ ಉಸ್ತುವಾರಿ ಸಚಿವರನ್ನು ನೀಡಲು ಆಗದ ಬಿಜೆಪಿ ಸರ್ಕಾರ ಈಗ ಅದ್ಯಾವ ಮುಖವಿಟ್ಟುಕೊಂಡು ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಕೊಪ್ಪಳ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಅವರು ವರ್ಷ ಪೂರ್ತಿ ಜನರ ಸಮಸ್ಯೆಯನ್ನು ಆಲಿಸಲಿಲ್ಲ. ರೈತರ, ಕಾರ್ಮಿಕರು ಸಹ ಸಚಿವ ಪಾಟೀಲ್ ಅವರನ್ನು ಭೇಟಿ ಮಾಡಲು ಪರದಾಡುವಂತಾಗಿದೆ ಎಂದು ಖಾಲಿದ್ ಕೊಪ್ಪಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದಿಂದ ಗದಗ ಜಿಲ್ಲೆಗೆ ಶೂನ್ಯ ಕೊಡುಗೆ ಸಿಕ್ಕಿದ್ದು, ಈಗ ಬಿಜೆಪಿ ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆ ಅದೊಂದು ಸೋಲಿನ ಯಾತ್ರೆ ಆಗಲಿದೆ ಎಂದು ಸೈಯದ್ ಖಾಲಿದ್ ಕೊಪ್ಪಳ ಟೀಕಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here