ವಿಜಯಸಾಕ್ಷಿ ಸುದ್ದಿ, ಗದಗ
ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ನೀರು ಕುಡಿಯಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನೀರು ಕುಡಿಯಲು ಕೆರೆಗೆ ಹೋಗಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಮೃತನನ್ನು ಗ್ರಾಮದ ಶಂಕರಗೌಡ (38) ಎಂದು ಗುರುತಿಸಲಾಗಿದೆ. ನುರಿತ ಈಜುಪಟುಗಳಿಂದ ಶವ ಹೊರತಗೆಯಲಾಗಿದ್ದು, ಕುಟುಂಬಸ್ಥರ ಆಕ್ರಂಧನ ಮುಗಿಲ ಮುಟ್ಟಿದೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮತ್ತೊಂದು ಪ್ರಕರಣದಲ್ಲಿ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದ ಸಮೀಪದ ಸಿಂಗಟಾಲೂರು ಏತ ನೀರಾವರಿ ಕಾಲುವೆಯಲ್ಲಿ ನೀರು ಕುಡಿಯಲು ಹೋಗಿದ್ದ ಬಾಲಕ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಹಾರೋಗೇರಿ ಗ್ರಾಮದ ಅಭಿಷೇಕ ಮಾದರ (14) ಮೃತಪಟ್ಟ ದುರ್ಧೈವಿ. ನೀರು ಕುಡಿಯಲು ಹೋದಾಗ ಕಾಲು ಜಾರಿ ಬಿದ್ದು ನೀರಲ್ಲಿ ಮುಳುಗಿ ಹೊರಬರಲಾರದೆ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಸ್ಥಳೀಯರು ಅಭಿಷೇಕನ ಶವ ಹೊರತಗೆದಿದ್ದಾರೆ. ಹೆತ್ತವರ ಹಾಗೂ ಸಂಬಂಧಿಕರ ಆಕ್ರಂಧನ ಮುಗಿಲಮುಟ್ಟಿದ್ದು,
ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.