HomeGadag News15 ದಿನಗಳಲ್ಲಿ ಅರ್ಹ ರೈತರಿಗೆ ಪರಿಹಾರ ನೀಡಲು ತಹಸೀಲ್ದಾರಗೆ ಶಾಸಕ ಲಮಾಣಿ ಸೂಚನೆ

15 ದಿನಗಳಲ್ಲಿ ಅರ್ಹ ರೈತರಿಗೆ ಪರಿಹಾರ ನೀಡಲು ತಹಸೀಲ್ದಾರಗೆ ಶಾಸಕ ಲಮಾಣಿ ಸೂಚನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ತಾಲೂಕಿನಲ್ಲಿ ಪರಿಹಾರದ ನಿರೀಕ್ಷೆಯಲ್ಲಿರುವ ಎಲ್ಲ ಅರ್ಹ ಫಲಾನುಭವಿಗಳಿಗೆ ಸರಕಾರದಿಂದ ಬೆಳೆ ಪರಿಹಾರವನ್ನು ೧೫ದಿನಗಳಲ್ಲಿ ತಲುಪಿಸಬೇಕೆಂದು ಶಾಸಕ ರಾಮಣ್ಣ ಲಮಾಣಿ ತಹಸೀಲ್ದಾರ ಕೆ.ಆರ್.ಪಾಟೀಲ ಅವರಿಗೆ ಸೂಚಿಸಿದರು.

ಅವರು ಸೋಮವಾರ ಶಿರಹಟ್ಟಿಯ ತಹಸೀಲ್ದಾರ ಕಚೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ ವಾರಸುದಾರರಿಗೆ ಹಾಗೂ ಆಕಸ್ಮಿಕ ಮರಣ ಹೊಂದಿದ ರೈತರ ಹಾಗೂ ಕೃಷಿ ಕಾರ್ಮಿಕ ಕುಟುಂಬಗಳ ವಾರಸುದಾರರಿಗೆ ಪರಿಹಾರ ಧನದ ಚೆಕ್ ವಿತರಿಸಿ ಮಾತನಾಡಿದರು.

ಶಿರಹಟ್ಟಿ ತಾಲೂಕಿನಲ್ಲಿಯ ಆರು ರೈತ ಮೃತ ಕುಟುಂಬಗಳ ವಾರಸುದಾರರಿಗೆ ತಲಾ ೫ಲಕ್ಷ ಪರಿಹಾರ ಹಾಗೂ ಮರಣ ಹೊಂದಿದ ನಾಲ್ಕು ರೈತರ ಹಾಗೂ ಕೃಷಿ ಕಾರ್ಮಿಕ ಕುಟುಂಬಗಳಿಗೆ ತಲಾ ೨ಲಕ್ಷ ರೂ. ಗಳ ಪರಿಹಾರ ಧನದ ಚೆಕ್ ವಿತರಿಸಲಾಗಿದ್ದು, ಆದ್ದರಿಂದ ರೈತರು ಪ್ರಕೃತಿ ವಿಕೋಪಗಳಂತಹ ಸಂದರ್ಭದಲ್ಲಾಗಲಿ ಅಥವಾ ಬೆಳೆನಷ್ಟದ ಸಂದರ್ಭದಲ್ಲಿ ಯಾವುದೇ ಹಂತದಲ್ಲೂ ಆತಂಕ ಪಡುವ ಅವಶ್ಯಕತೆ ಇಲ್ಲ. ಸರಕಾರ ರೈತರ ಆರ್ಥಿಕ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ಇತ್ತೀಚೆಗೆ ಶಿರಹಟ್ಟಿ ಪಟ್ಟಣದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವರುಗಳಿಗೆ ವಿನಂತಿಸಿಕೊಂಡಿದ್ದು, ಇವರೆಲ್ಲರೂ ಭರವಸೆಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ಕ್ಷೇತ್ರದಲ್ಲಿ ನಡೆಯಲಿವೆ ಎಂದರು.

ತಹಸೀಲ್ದಾರ ಕೆ.ಆರ್.ಪಾಟೀಲ, ಸಂದೀಪ ಕಪ್ಪತ್ತನವರ, ಯಲ್ಲಪ್ಪ ಇಂಗಳಗಿ, ರಾಮಣ್ಣ ಕಂಬಳಿ, ಶ್ರೀನಿವಾಸ ಬಾರಬಾರ, ಜಗದೀಶ ತೇಲಿ ಹಾಗೂ ಕಂದಾಯ ನಿರೀಕ್ಷಕ ಮಹಾಂತೇಶ ಮಗದುಮ್, ಲಕ್ಷ್ಮಣ ಲಮಾಣಿ ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!