ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ:
Advertisement
ಸಮೀಪದ ಹಂಗನಕಟ್ಟಿ ಕ್ರಾಸ್ ತಿರುವಿನಲ್ಲಿ ಶುಕ್ರವಾರ ಸಂಜೆ ಹಂಗನಕಟ್ಟಿಯಿಂದ ಮದುವೆ ಸಮಾರಂಭವನ್ನು ಮುಗಿಸಿ ಕೊಂಡು ಅಣ್ಣಿಗೇರಿಗೆ ಹೊರಟಿದ್ದ ಟ್ರ್ಯಾಕ್ಟರ್ ಹುಕ್ ಮುರಿದು ಬಿದ್ದು ಟ್ರೇಲರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪ್ರದೀಪ್ ಕರಿಬಸಣ್ಣನವರ (13) ವಿನಾಯಕ ಸಬನೇಶಿ (18) ಮೃತ ದುರ್ದೈವಿಗಳು.

18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ಆರು ಜನರಿಗೆ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.