ಚಿಂತಾಜನಕ ಸ್ಥಿತಿಯಲ್ಲಿ ಗಾಯಾಳು…ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ….
Advertisement
ವಿಜಯಸಾಕ್ಷಿ ಸುದ್ದಿ, ಗದಗ
ಆರೋಪಿಯೊಬ್ಬ ಎದುರು ಮನೆಯ ವ್ಯಕ್ತಿಯೊಬ್ಬನಿಗೆ ಹೊಟ್ಟೆಯ ಭಾಗಕ್ಕೆ ಆರು ಬಾರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಡಂಬಳ ನಾಕಾ ಬಳಿ ಇರುವ ಎಸ್ ಬಿ ಗಾರ್ಡನ್ ಹತ್ತಿರ ಇರುವ ಮನೆಯಲ್ಲಿ ಈ ಘಟನೆ ನಡೆದಿದ್ದು, ಇಮಾಮ್ ಹುಸೇನ್ ಕಾಗದಗಾರ ಎಂಬ ಮೆಕ್ಯಾನಿಕಲ್ ತೀವ್ರ ಗಾಯಗೊಂಡು ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
76 ಪ್ಲಾಟ್ ನಿವಾಸಿ ಕೆಂಚಪ್ಪ ಎಂಬ ಆರೋಪಿ ಈ ದುಷ್ಕತ್ಯ ಎಸೆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂದು ಸದ್ಯಕ್ಕೆ ತಿಳಿದು ಬಂದಿಲ್ಲ.
ಈ ಕುರಿತು ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.