ಆತ್ಮಹತ್ಯೆಗೆ ಯತ್ನಿಸಿದ್ದ ವಿಚಾರಾಣಾಧೀನ ಖೈದಿ ಸಾವು

0
Spread the love

ಮಹಿಳೆ ಕೊಲೆ ಆರೋಪದಲ್ಲಿ ಜೈಲು ಪಾಲಾಗಿದ್ದ ಆರೋಪಿ

Advertisement

ವಿಜಯಸಾಕ್ಷಿ ಸುದ್ದಿ, ಗದಗ

ಕತ್ತು ಕೊಯ್ದಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಖೈದಿ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಬಸಪ್ಪ ನಾಗಪ್ಪ ಚಂದ್ರ (50) ಮೃತಪಟ್ಟ ವಿಚಾರಣಾಧೀನ ಖೈದಿ.

ಏಪ್ರಿಲ್ 17ರಂದು ಮುಂಜಾನೆ ಬೆಟಗೇರಿಯ ಸಬ್ ಜೈಲಿನ ಬಾತರೂಮ್ ನಲ್ಲಿ ಬ್ಲೇಡ್ ನಿಂದ ಕತ್ತು ಕೊಯ್ದಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ತಕ್ಷಣವೇ ಜೈಲು ಸಿಬ್ಬಂದಿ ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಬಸಪ್ಪ ಮೃತಪಟ್ಟಿದ್ದಾನೆ.

2022ರ ಡಿಸೆಂಬರ್ 18ರಂದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪ ಗ್ರಾಮದಲ್ಲಿ ಮಹಿಳೆಯನ್ನು ಕೊಲೆಗೈದು ಜೈಲು ಸೇರಿದ್ದ.

ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here