HomeCrime Newsಗದಗ ಸಬ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಗದಗ ಸಬ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

Spread the love

ಜಾಮೀನು ಸಿಕ್ಕ ಬೆನ್ನಲ್ಲೇ ಗದಗ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ; ಕುಟುಂಬಸ್ಥರ ಆಕ್ರಂದನ

ವಿಜಯಸಾಕ್ಷಿ ಸುದ್ದಿ, ಗದಗ:

ಪೋಕ್ಸೋ ಕಾಯ್ದೆಯಡಿ ಗದಗ ಜಿಲ್ಲಾ ಕಾರಾಗೃಹದ ಪಾಲಾಗಿದ್ದ ವಿಚಾರಣಾಧೀನ ಖೈದಿಯೊಬ್ಬ ಕಟ್ಟಡದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಗದಗ ತಾಲೂಕಿನ ಅಡವಿ ಸೋಮಾಪುರ ತಾಂಡಾದ ನಿವಾಸಿ ರಾಜು ಪಾಂಡಪ್ಪ ಲಮಾಣಿ (19) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಶುಕ್ರವಾರ ಮಧ್ಯರಾತ್ರಿ 1.30ರ ಸುಮಾರಿಗೆ ಕಾರಾಗೃಹದಲ್ಲಿರುವ ಇನ್ನಿತರ ಖೈದಿಗಳ ಟವೆಲ್ ತೆಗೆದುಕೊಂಡು ಮೊದಲ ಬಾರಿಗೆ ಪ್ರಯತ್ನಿಸುತ್ತಾನೆ. ಸಾಧ್ಯವಾಗದಿದ್ದಾಗ ಪುನಃ ಎರಡನೇ ಬಾರಿಗೆ ಪ್ರಯತ್ನಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಾರಾಗೃಹದ ಸಿಸಿ ಕ್ಯಾಮೆರಾದಲ್ಲಿ ರಾಜು ಆತ್ಮಹತ್ಯೆಯ ಯತ್ನದ‌ ವಿಡಿಯೋ ದಾಖಲಾಗಿವೆ.

ಹುಡುಗಿಯ ಮನೆಯವರು ಗುರುವಾರ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಜಾಮೀನು ಮೇಲೆ ಬಿಡುಗಡೆಯಾದರೂ ನಿನ್ನನ್ನು ಬಿಡುವುದಿಲ್ಲ ಎಂದು ಧಮ್ಕಿ ಹಾಕಿದ್ದಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಆತ್ಮಹತ್ಯೆಗೆ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಡವಿ ಸೋಮಾಪುರ ಗ್ರಾಮದ ರಾಜು ಪಾಂಡಪ್ಪ ಲಮಾಣಿ ಅದೇ ಊರಿನ‌ ಹುಡುಗಿಯನ್ನು ಪ್ರೀತಿಸಿದ್ದ. ಹುಡುಗಿ‌ ಕಾಣೆಯಾಗಿದ್ದಾಳೆಂದು ಗ್ರಾಮೀಣ‌ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಾದ 8 ದಿನಗಳ ಬಳಿಕ ಸಿಕ್ಕ ಹುಡುಗಿಯನ್ನು ಗ್ರಾಮೀಣ ಪೊಲೀಸ್ ಠಾಣೆಗೆ ಕರೆದುಕೊಂಡು 161 ಹೇಳಿಕೆಯನ್ನು ದಾಖಲಿಸಿದ್ದಾರೆ.

ಈ ಹೇಳಿಕೆಯಲ್ಲಿ
‘ರಾಜು ನಾನು ಬೆಂಗಳೂರು, ಗೊವಾ ಹೋಗಿದ್ವಿ‌. ಹೋದಲ್ಲೆಲ್ಲಾ ಜೊತೆಗಿದ್ವಿ’ ಎಂದು ಹೇಳಿದ್ದಾಳೆ.
ನ್ಯಾಯಾಧೀಶರ ಮುಂದೆ 164ರಡಿ ಹೇಳಿಕೆ ದಾಖಲಿಸಿದ್ದು, ‘ನಾನು ಗೆಳತಿಯರೊಂದಿಗೆ ಹೋಗಿದ್ದೆ. ರಾಜು ಮೇಲೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ’ ಎಂದು ಹೇಳಿದ್ದಳು. ಇದಾದ ಬಳಿಕ ನಾವು ಜಾಮೀನು ಅರ್ಜಿ ಸಲ್ಲಿಸಿದ ಬಳಿಕ ಸಾಕ್ಷಿದಾರರಿಗೆ ನೋಟಿಸ್ ನೀಡಲಾಗಿದೆ.

ರಾಜು ಲಮಾಣಿಯ ಪಿಯುಸಿ ಪರೀಕ್ಷೆ ಮತ್ತು ಆರೋಪಿಯ ವಿರುದ್ಧ ಅಂತಹ ಯಾವುದೇ ಗಂಭೀರ ಆರೋಪವಿಲ್ಲ. ಇದೊಂದು ಸುಳ್ಳು ಪ್ರಕರಣವಾಗಿದೆ ಎಂಬ ವಾದ ಮಂಡನೆಯ ಬಳಿಕ ಎರಡು ದಿನಕ್ಕೊಮ್ಮೆ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಹಿ‌ ಹಾಕಿ ಬರಬೇಕೆಂದು ಷರತ್ತು ವಿಧಿಸಿ ಗುರುವಾರ(ಏ.07)ದಂದು 5.25ಕ್ಕೆ ಜಾಮೀನು ಆದೇಶವಾಗಿತ್ತು. ಆದರೆ, ನಿನ್ನೆ ನ್ಯಾಯಾಲಯದ ಸಮಯ ಮುಗಿದಿದ್ದರಿಂದ ಕಾರಾಗೃಹಕ್ಕೆ ಮಾಹಿತಿ ಬಂದಿರಲಿಲ್ಲವಾದರೂ, ನಾನು ಕರೆ ಮಾಡಿ ಜಾಮೀನು ಸಿಕ್ಕಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ಜಾಮೀನು ಸಿಕ್ಕಿರುವ ಮಾಹಿತಿ ಮೃತ ಯುವಕನಿಗೆ ಸಿಕ್ಕಿದ್ದರೆ ಹೀಗಾಗುತ್ತಿರಲಿಲ್ಲವೇನೋ’ ಎಂದು ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ಯುವಕನ ಪರ ವಕೀಲರಾದ ಎಂ.ಎ.ಮೌಲ್ವಿ ಮಾಹಿತಿ ನೀಡಿದ್ದಾರೆ.


ಏನಿದು ಪ್ರಕರಣ?

ಅಡವಿ ಸೋಮಾಪುರ ಗ್ರಾಮದ ರಾಜು ಪಾಂಡಪ್ಪ ಲಮಾಣಿ‌ ಗದಗನ ಜೆಟಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ, ಅದೇ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಅಡವಿ ಸೋಮಾಪುರ ಗ್ರಾಮದ ಅಪ್ರಾಪ್ತ ವಯಸ್ಸಿನ ಯುವತಿಯನ್ನು (16ವರ್ಷ 7 ತಿಂಗಳು) ಪ್ರೀತಿಸುತ್ತಿದ್ದ. ತಾನು ಪ್ರೀತಿಸುತ್ತಿದ್ದ ಹುಡುಗಿಯನ್ನು ಗೋವಾಗೆ ಕರೆದುಕೊಂಡು ಹೋಗಿದ್ದನಂತೆ. ಈ ಬಗ್ಗೆ ಹುಡುಗಿಯ ಮನೆಯವರು ಗದಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾಣೆ ಪ್ರಕರಣ ದಾಖಲಿಸಿದ್ದರಂತೆ. ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಕಳೆದ 20-25 ದಿನಗಳ ಹಿಂದೆಯಷ್ಟೇ ರಾಜು ಲಮಾಣಿ ಜೈಲು ಪಾಲಾಗಿದ್ದ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!