ತಹಸೀಲ್ದಾರ್ ದಾಳಿ; ಅಕ್ರಮವಾಗಿ ಸಂಗ್ರಹಿಸಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ವಶಕ್ಕೆ

0
Spread the love

ತಹಸೀಲ್ದಾರ ಶೃತಿ ಮಳಪ್ಪಗೌಡ, ಆಹಾರ ನಿರೀಕ್ಷಕ ಜಗದೀಶ ಅಮಾತಿ, ಪೊಲೀಸ್ ಸಿಬ್ಬಂದಿಗಳ ಜಂಟಿ ದಾಳಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ/ಗದಗ

ಸಾರ್ವಜನಿಕರಿಗೆ ವಿತರಿಸುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹ ಮಾಡಲಾಗಿದ್ದ ಗೋಡಾನ್ ಒಂದರ ಮೇಲೆ ದಾಳಿ ಮಾಡಿರುವ ತಹಸೀಲ್ದಾರ್ ಹಾಗೂ ಸಿಬ್ಬಂದಿ ಅಪಾರ ಪ್ರಮಾಣದ ಅನ್ನ ಭಾಗ್ಯ ಅಕ್ಕಿ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ  ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಕಾಂಗ್ರೆಸ್ ಮುಖಂಡ ಶ್ರೀಧರ್ ವಜ್ರಬಂಡಿ ಸೇರಿ ಮೂವರ ಬಂಧನ

ಮುಂಡರಗಿ ತಾಲೂಕಿನ ಚುರ್ಚಿಹಾಳ ಗ್ರಾಮದ ಹೊರವಲಯದ ಜಮೀನಿನಲ್ಲಿರುವ ಗೋಡಾನ್‌ ಒಂದರಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿಡಲಾಗಿದ್ದ ಮಾಹಿತಿ ತಿಳಿದು ತಹಸೀಲ್ದಾರ ಶೃತಿ ಮಳಪ್ಪಗೌಡ, ಡಂಬಳದ ಆಹಾರ ನಿರೀಕ್ಷಕ ಜಗದೀಶ ಅಮಾತಿ ಹಾಗೂ ಪೊಲೀಸ್ ಸಿಬ್ಬಂದಿಗಳು ಜಂಟಿಯಾಗಿ ದಾಳಿ ನಡೆಸಿ, ಅಕ್ಕಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ ಬಿಜೆಪಿ-ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆ!

ಚುರ್ಚಿಹಾಳ ಹದ್ದಿಯಲ್ಲಿ ಬರುವ ಜಮೀನಿನ ಮಾಲಕ ಗದಗನ ಕಳಸಾಪೂರ ರಸ್ತೆಯ ರಘುನಾಥರಡ್ಡಿ ಬಸವರಡ್ಡಿ ಸಾಸ್ವಿಹಳ್ಳಿ ಇವರ ಮೇಲೆ ಪ್ರಕರಣ ದಾಖಲಾಗಿದೆ.

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಗಡಿನ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಒಟ್ಟೂ 71.90 ಕ್ವಿಂಟಲ್‌ ತೂಕದ 1,65,370 ರೂ. ಬೆಲೆಯ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here