ಮರದಿಂದ ಮರಕ್ಕೆ ಜಿಗಿಯುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು
Advertisement
ವಿಜಯಸಾಕ್ಷಿ ಸುದ್ದಿ, ತುಮಕೂರು
ಮರದಿಂದ ಮರಕ್ಕೆ ಜಿಗಿಯುವಾಗ ಚಿರತೆಯೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಸಾವಿಗೀಡಾಗಿದೆ.

ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕರೇಗೌಡನ ಹಳ್ಳಿ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಬಹುಶಃ ಚಿರತೆ ಒಂದು ಮರದಿಂದ ಮತ್ತೊಂದು ಮರಕ್ಕೆ ಜಿಗಿಯುವ ಸಂದರ್ಭದಲ್ಲಿ ಆಯ ತಪ್ಪಿ ವಿದ್ಯುತ್ ತಂತಿಯ ಮೇಲೆ ಬಿದ್ದಿರಬಹುದು, ಆಗ ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವಿಗೀಡಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.