HomeCrime Newsವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯ

ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯ

For Dai;y Updates Join Our whatsapp Group

ಬಸವೇಶ್ವರ ಜಾತ್ರೆಗೆ ಡ್ರೆಸ್ ತರಲು ಹೋಗಿದ್ದಾಗ ಘಟನೆ…

ವಿಜಯಸಾಕ್ಷಿ ಸುದ್ದಿ, ನರಗುಂದ

ದ್ವಿಚಕ್ರ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.

ಗದಗ ರಸ್ತೆಯ ಕುರ್ಲಗೇರಿ ಗ್ರಾಮದ ಬಳಿ ನಡೆದ ಈ ಘಟನೆಯಿಂದಾಗಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಸುರೇಶ್ (26) ಎಂಬಾತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಸವಾರ ಸಂತೋಷ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ರವಾನೆ ಮಾಡಲಾಗಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ಶ್ರಾವಣ ಮಾಸದ ಕಡೆ ಸೋಮವಾರ ಬಸವೇಶ್ವರ ಜಾತ್ರೆ ಇತ್ತು. ಹೀಗಾಗಿ ನರಗುಂದ ಪಟ್ಟಣಕ್ಕೆ ಡ್ರೆಸ್ ತರಲು ಹೋಗಿದ್ದರು ಎಂದು ಎನ್ನಲಾಗಿದೆ.

ಡ್ರೆಸ್ ಖರೀದಿಸಿ ವಾಪಾಸು ಗ್ರಾಮಕ್ಕೆ ಬರುವಾಗ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ಜರುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img