ವಿಜಯಸಾಕ್ಷಿ ಸುದ್ದಿ, ರೋಣ
ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಿವಿಎಸ್ ಎಕ್ಸೆಲ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.

ರೋಣ ತಾಲೂಕಿನ ಅಬ್ಬಿಗೇರಿ ರಸ್ತೆಯ ಸಾರಿಗೆ ಸಂಸ್ಥೆಯ ಬಸ್ ಡಿಪೋ ಬಳಿ ನಡೆದ ಅಪಘಾತದಲ್ಲಿ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ವಸಂತ ಮಲ್ಲಪ್ಪ ಗುಡಿಸಾಗರ (30) ಎಂಬಾತ ಮೃತಪಟ್ಟಿದ್ದಾನೆ.
ಇದನ್ನೂ ಓದಿ ರಾತ್ರಿಯಿಡಿ ಕಾರ್ಯಾಚರಣೆ; ನೀರುಪಾಲಾಗಿದ್ದ ಇಬ್ಬರು ಬಾಲಕರು ಶವವಾಗಿ ಪತ್ತೆ
ವಸಂತ ರೋಣ ತಾಲೂಕಿನ ಇಟಗಿ ಭೀಮಾಂಬಿಕಾ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿಕೊಂಡು ವಾಪಾಸು ತನ್ನೂರಿಗೆ ಹೊರಟಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಮೃತ ವಸಂತನ ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು 0144/2023, 279, 304(ಎ)ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.