ಲೋಕಾಯುಕ್ತರ ದಾಳಿ; ಉತಾರ ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಬಲೆಗೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಒಬ್ಬರ ಹೆಸರಿಗೆ ಜಮೀನು ನೋಂದಣಿ ಮಾಡಿ ಉತಾರ ಕೊಡಲು ಲಂಚ ಕೇಳಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಜರುಗಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಗ್ರಾಮ ಪಂಚಾಯತಿಯ ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪ ಹುಯಿಲಗೋಳ ಎಂಬುವವರೇ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದವರು.

ವಾಸನ ಗ್ರಾಮದ ಹನಮಂತರಾಯಗೌಡ ಮೂಲಿಮನಿ ಎಂಬುವರು, ತಮ್ಮ ಸಹೋದರನ ಹೆಸರಿನಲ್ಲಿ ಜಮೀನು ನೋಂದಣಿ ಮಾಡಿಕ ಉತಾರ ಕೊಡುವ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪ ಹುಯಿಲಗೋಳ ಎರಡೂವರೆ ಸಾವಿರ ರೂ.ಗಳ ಲಂಚ ಕೇಳಿದ್ದ ಬಗ್ಗೆ ಲೋಕಾಯುಕ್ತರ ಕಚೇರಿಗೆ ದೂರು ನೀಡಿದ್ದರು.

ಶುಕ್ರವಾರ ಸಂಜೆ ಹನಮಂತರಾಯಗೌಡ ಮೂಲಿಮನಿ ಎಂಬುವರ ಮನೆಯ ಹತ್ತಿರ, ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪ ಎರಡೂವರೆ ಸಾವಿರ ರೂ.ಗಳನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತರ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್ಪಿ ಶಂಕರ ಎಮ್ ರಾಗಿ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರಗಳಾದ ರವಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಸಿಬ್ಬಂದಿಗಳಾದ ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಮುತ್ತುರೆಡ್ಡಿ ಬಾರಡ್ಡಿ, ಗುಬ್ಬಿ, ಅಯ್ಯನಗೌಡರ, ವಾಹನ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಈ ಕಾರ್ಯಾಚರಣೆಯಲ್ಲಿ ಇದ್ದರು.


Spread the love

LEAVE A REPLY

Please enter your comment!
Please enter your name here