ವಿಜಯಸಾಕ್ಷಿ ಸುದ್ದಿ, ನರಗುಂದ
ಬಡ ಮಕ್ಕಳಿಗೆ ಕೊಡುವ ಸ್ಕಾಲರ್ಶಿಪ್ ರದ್ದು ಮಾಡಿದ ನೀಚ ಬಿಜೆಪಿ ಸರ್ಕಾರ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ವಿವೇಕ ಯಾವಗಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಡವರ ಮಕ್ಕಳು ಶಾಲೆಗೆ ಹೋಗುವ ದಾರಿಯಲ್ಲಿ ಮುಳ್ಳು ಹಾಕುವ ಕೆಲಸ ಮಾಡುತ್ತಿದೆ. ಬಡ ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಶೇ.75 ಹಾಗೂ ರಾಜ್ಯದಿಂದ ಶೇ.25ರಷ್ಟು ಪಾಲುದಾರಿಕೆಯಲ್ಲಿ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಏಕಾಏಕಿ ಸ್ಥಗಿತಗೊಳಿಸಿದ್ದು ಸರಿಯಲ್ಲ.
ಕೇಂದ್ರ ಸರ್ಕಾರದ ಈ ನಿಲುವನ್ನು ರಾಜ್ಯ ಸರ್ಕಾರ ಖಂಡಿಸಿ, ಈ ಆದೇಶವನ್ನು ಹಿಂಪಡೆಯಬೇಕು ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ನರಗುಂದ ಮತ ಕ್ಷೇತ್ರದ ಯುವ ನಾಯಕ ವಿವೇಕ ಯಾವಗಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.



