ಲಾರಿಗೆ ಕಾರು ಡಿಕ್ಕಿ; ನಗರಸಭೆ ಉಪಾಧ್ಯಕ್ಷೆ ಪಾರು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:

Advertisement

ವೇಗವಾಗಿ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಗರಸಭೆ ಉಪಾಧ್ಯಕ್ಷೆ, ಹಾಗೂ ಕಾರು ಚಾಲನೆ ಮಾಡುತ್ತಿದ್ದ ಪುತ್ರ ಗಾಯಗೊಂಡ ಘಟನೆ ತಾಲ್ಲೂಕಿನ ಹುಲಕೋಟಿ ಗ್ರಾಮದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಗದಗ ಕಡೆ ಬರುತ್ತಿದ್ದಾಗ ಈ ದುರ್ಘಟನೆ ಜರುಗಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಏರಬ್ಯಾಗ್ ಒಪನ್ ಆದ ಪರಿಣಾಮ ಯಾವುದೇ ಗಂಭೀರ ಗಾಯವಾಗಿಲ್ಲ ಎನ್ನಲಾಗಿದೆ.

ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ತಲೆಗೆ ಸ್ವಲ್ಪ ಪ್ರಮಾಣದ ಪೆಟ್ಟು ಬಿದ್ದಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪುತ್ರ ದತ್ತು ಬಾಕಳೆ ಕಾರು ಚಾಲನೆ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.


Spread the love

LEAVE A REPLY

Please enter your comment!
Please enter your name here