ವಿಜಯಸಾಕ್ಷಿ ಸುದ್ದಿ, ಗದಗ:
Advertisement
ಜಿಲ್ಲೆಯ ನರಗುಂದ ಪೊಲೀಸ್ ಉಪವಿಭಾಗಕ್ಕೆ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 12 ಲಕ್ಷ ರೂ. ಮೊತ್ತದ ನೂತನ ಮಹೀಂದ್ರಾ ಸ್ಕಾರ್ಪಿಯೋ ವಾಹನವನ್ನು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಜಿಪಂ ಸಿಇಒ ಭರತ್ ಕೆ., ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.